ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಯ ಫ್ಲ್ಯಾಟ್ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಂಗಳವಾರ ಅಗ್ನಿ ಅವಘಡ ಸಂಭವಿಸಿದೆ.ಈ ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಐದು ಜನರಿಗೆ ಗಾಯವಾಗಿದೆ.
ಸಿಲಿಂಡರ್ ಸ್ಫೋಟಕ್ಕೆ ಒಂದು ಫ್ಲಾಟ್ ಹೊತ್ತಿ ಉರಿದಿದೆ. ಬೆಂಗಳೂರು ನಗರದ ದೇವರಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ.
ಇಲ್ಲಿನ ಆಶ್ರೀತ ಅಪಾರ್ಟ್ಮೆಂಟ್ನಲ್ಲಿ ಸಿಲಿಂಡರ್ ಸ್ಪೋಟ ಆಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ. ಬೇಗೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.