Trending

ಡಿ. 31ರ ರಾತ್ರಿ ಕಂಪನಿ ಕೊಡು ಎಂದು ನಟಿ ಚಿತ್ರಾ ಗೆ ಆಫರ್ ಕೊಟ್ಟಿದ್ಯಾರು?

  • ನಿಗೂಢವಾಗುತ್ತಿರುವ ನಟಿ ಚಿತ್ರಾ ಆತ್ಮಹತ್ಯೆ ಕಾರಣಗಳು….
  • ಡಿ 31 ರ ರಾತ್ರಿ ಹೊಸ ವರ್ಷಾಚರಣೆಯ ರಾತ್ರಿ ನನ್ನೊಂದಿಗೆ ಕಾಲ ಕಳೆಯಬೇಕು ಎಂದು ಒತ್ತಾಯಿಸಿದ ಆ ರಾಜಕಾರಣಿ ಯಾರು?

ತಮಿಳು ಕಿರುತೆರೆ ನಟಿ ವಿಜಿ ಚಿತ್ರಾಳ‌ ಆತ್ಮಹತ್ಯೆ ದಿನಕ್ಕೊಂದು ತಿರುವು ಪಡೆಯುತ್ತಿದೆ.

ಮದ್ಯ ವ್ಯಸನಿ ಗಂಡನೊಂದಿಗೆ….

ಮದ್ಯವ್ಯಸನಿಯಾಗಿರುವ ಗಂಡ ಹೇಮಂತ್ ನಡವಳಿಕೆ ಸರಿ ಇರಲಿಲ್ಲ. ತಮಿಳುನಾಡಿನ ಓರ್ವ ಮಂತ್ರಿ ಹಾಗೂ ಶಾಸಕರು ಕೂಡ ಆಕೆಯ ಸ್ನೇಹ ಬಯಸಿದ್ದರು ಎಂಬ ಸಂಗತಿಗಳು ಬಯಲಾಗಿದೆ.

ಈ ನಡುವೆ ಮಂತ್ರಿಯೊಬ್ಬರು ಚಿತ್ರಾ ತಂಗಿದ್ದ ಹೋಟೆಲ್ ಗೆ ಬಂದು ಹೋಗಿದ್ದರಂತೆ. ಅದೇ ರೀತಿ ಶಾಸಕರೊಬ್ಬರು ಅ 21 ರಂದು ಪೆರಂಬೂರುನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರಾ ಪಾಲ್ಗೊಂಡಿದ್ದರು. ಅದೇ ದಿನ ಶಾಸಕ ಕೂಡ ಅಲ್ಲಿಗೆ ಬಂದಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ.

ವರ್ಷಾಚರಣೆಗೆ ಕರೆದವರು ಯಾರು? :

ರಾಜಕಾರಣಿಯೊಬ್ಬ ಚಿತ್ರಾಳೊಂದಿಗೆ ಅನೇಕ ಬಾರಿ ದೂರವಾಣಿ ಕರೆ ಮಾಡಿ ಮಾತನಾಡಿ ಡಿ 31 ರಂದು ರಾತ್ರಿ ಹೊಸ ವರ್ಷಾಚರಣೆಯ ಕಾರ್ಯಕ್ರಮದಲ್ಲಿ ನನ್ನೊಂದಿಗೆ ಕಾಲ ಕಳೆಯಬೇಕು ಎಂದು ಬೇಡಿಕೆ ಇಟ್ಟಿದ್ದನಂತೆ. ಆ ರಾಜಕಾರಣಿ ಯಾರು ಎಂಬುದು ಇನ್ನೂ ನಿಗೂಢ ವಾಗಿದೆ. ಇಂತಹ ಎಲ್ಲಾ ಸನ್ನಿವೇಶ ಗಳನ್ನು ಎದುರಿಸಲು ಸಾಧ್ಯವಾಗದ ಚಿತ್ರಾ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು ಎಂದು ಪೋಲಿಸರು ತಿಳಿಸಿದ್ದಾರೆ.

ಈ ಎಲ್ಲಾ ಕಾರಣಗಳೂ ಕೂಡ ಕಿರುತೆರೆ ಕಲಾವಿದೆ ಹಾಗೂ ವಿಡಿಯೋ ಜಾಕಿ ಚಿತ್ರಾ ದಿಢೀರ್​ ಸಾವಿಗೆ ಅನುಮಾನಗಳ ಹುತ್ತ ಕಟ್ಟುವಂತೆ ಮಾಡಿವೆ.

ಚಿತ್ರಾರ ಶವಪರೀಕ್ಷೆಯಲ್ಲಿ ಆತ್ಮಹತ್ಯೆ ಎಂಬುದು ಖಚಿತವಾಗಿದೆ. ಗಂಡ ಹೇಮಂತ್​ ನಡತೆಯ ಮೇಲೆ ಚಿತ್ರಾರ ತಾಯಿಗೆ ಅನುಮಾನ ಬಂದಾಗಿನಿಂದ ಆತನಿಂದ ದೂರವಾಗವಂತೆ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ಚಿತ್ರಾ ಒತ್ತಡಕ್ಕೆ ಸಿಲುಕಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿತ್ತು.

ಮದ್ಯ ವ್ಯಸನಿಯಾಗಿದ್ದ ಹೇಮಂತ್​, ಚಿತ್ರಾ ವಿಚಾರದಲ್ಲಿ ಅತಿಯಾದ ಪೊಸೆಸಿವ್​ನೆಸ್​ ಇತ್ತಂತೆ.

ಸೀರಿಯಲ್​ಗಳಲ್ಲಿ ರೊಮ್ಯಾಂಟಿಕ್​ ದೃಶ್ಯದಲ್ಲಿ ನಟನೆ ಮಾಡಿದರೆ ಶೂಟಿಂಗ್​ ಸೆಟ್​ನಲ್ಲಿ ಚಿತ್ರಾಳನ್ನು ಬೈಯುತ್ತಿದ್ದರು ಎಂದು ಈ ಹಿಂದೆ ವರದಿಯಾಗಿತ್ತು.

ಇದೀಗ ಮತ್ತೊಂದು ವರದಿಯ ಪ್ರಕಾರ ರಾಜಕಾರಣಿಯೊಬ್ಬ ಚಿತ್ರಾರಿಗೆ ಕಿರುಕುಳ ನೀಡುತ್ತಿದ್ದರಂತೆ. ಅಲ್ಲದೆ, ಅನೇಕ ಬಾರಿ ಮೊಬೈಲ್​ ಕರೆ ಸಹ ಮಾಡಿದ್ದಾರೆಂದು ವರದಿಯಲ್ಲಿ ಉಲ್ಲೇಖವಾಗಿದೆ.

ಒಟ್ಟಾರೆ ಯುವ ನಟಿ ಚಿತ್ರಾಳ ಆತ್ಮಹತ್ಯೆ ಹಿಂದಿನ ಸತ್ಯವನ್ನು ಹೊರ ತರಬೇಕಿದೆ.

Team Newsnap
Leave a Comment
Share
Published by
Team Newsnap

Recent Posts

ಮೂಡಾ ಹಗರಣ : ಸಿಎಂ ವಿರುದ್ಧ ತನಿಖೆಗೆ ಕೋರ್ಟ್ ಅಸ್ತು – ಸಿದ್ದುಗೆ ಸಂಕಷ್ಟ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More

September 24, 2024

ಈ ಬಾರಿ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More

September 24, 2024

ದರ್ಶನ್ , ಪವಿತ್ರ ಜಾಮೀನು ಮುಂದೂಡಿಕೆ:ಮೂವರಿಗೆ ಜಾಮೀನು ಮಂಜೂರು

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More

September 23, 2024

ಸೆ. 24 ರಂದು ಯುವ ಸಂಭ್ರಮ ಉದ್ಘಾಟನಾ ಸಮಾರಂಭ

ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More

September 23, 2024

ದಸರಾ ಚಲನಚಿತ್ರೋತ್ಸವ 2024- ಪೋಸ್ಟರ್ ಬಿಡುಗಡೆ

ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More

September 23, 2024

ಮೈಸೂರಿನಲ್ಲಿ ಉಚಿತ ಆಟೋ ರಿಕ್ಷಾ ತರಬೇತಿ

ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More

September 23, 2024