2021 ರ ಹೊಸ ವರ್ಷವನ್ನು ಸಂಭ್ರಮ, ಮೋಜು, ಮಸ್ತಿಗಳಿಂದ ಬರಮಾಡಿ ಕೊಳ್ಳುವ ಜನರ ಲೆಕ್ಕಾಚಾರಕ್ಕೆ ಸರ್ಕಾರ ಬ್ರೇಕ್ ಹಾಕುವ ಸಾಧ್ಯತೆಗಳು ನಿಚ್ಚಳವಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಆದರೆ ಚಳಿಗಾಲಕ್ಕೆ ಮತ್ತೆ ಎರಡನೇ ಬಾರಿಗೆ ಅಲೆ ಅಪ್ಪಳಿಸುವ ಅಪಾಯವಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ವಿಧಿಸುವಂತೆ ತಜ್ಙರು ಸರ್ಕಾರಕ್ಕೆ ಸಲಹೆ ನೀಡಿರವ ಹಿನ್ನೆಲೆಯಲ್ಲಿ ಸರ್ಕಾರ ಹೊಸವರ್ಷಾಚರಣೆಗೆ ಬ್ರೇಕ್ ಹಾಕುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಈಗಾಗಲೇ ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿದೆ. ಈ ತಿಂಗಳಾಂತ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡುವಂತೆ ಸಲಹೆ ನೀಡಿದೆ. ಡಿಸೆಂಬರ್ ಡಿ 26 ರಿಂದ ಜನವರಿ2 ರ ತನಕ ಹೊಸವರ್ಷಾಚರಣೆಯಲ್ಲಿ ಜನತೆ ಮೈ ಮರೆಯುವ ಅಪಾಯವಿದೆ. ಹೀಗಾಗಿ 8 ದಿನಗಳ ಕಾಲರಾತ್ರಿ ಕರ್ಫ್ಯೂ ವಿಧಿಸುವುದು ಹೆಚ್ಚು ಸುರಕ್ಷಿತ ಎಂದು ಸಮಿತಿ ಹೇಳಿದೆ.
ಈಗಾಗಲೇ ಬಿಬಿಎಂಪಿಯವರು ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಪ್ರಮುಖ ಏರಿಯಾಗಳಲ್ಲಿ ಹೊಸ ವರ್ಷಾಚರಣೆಯನ್ನು ಬ್ಯಾನ್ ಮಾಡಿದ್ದಾರೆ.
ಡಿ 26 ರ ರಾತ್ರಿಯಿಂದ ಜನರು ಮನೆಯಿಂದಲೇ ಹೊರಗೆ ಬರುವಂತೆ ಇಲ್ಲ. ಹೀಗಾಗಿ ವರ್ಷಾಚರಣೆಗೆ ಈ ಬಾರಿ ಬ್ರೇಕ್ ಬೀಳಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ