ಮಾಜಿ ಸಚಿವ ಈಶ್ವರಪ್ಪನವರನ್ನು ಜೈಲಿಗೆ ಹಾಕೋದಲ್ಲ. ಮೊದಲು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರನ್ನು ಜೈಲಿಗೆ ಹಾಕಬೇಕು, ಹೀಗೆಂದು ವಾಗ್ದಾಳಿ ನಡೆಸಿದವರು ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್.
ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್ ಅವರು, ಪೊಲೀಸರು ಹಾಕಿದ ಬ್ಯಾರಿಕೇಡ್ ಹಾರುವಷ್ಟು ಶಕ್ತಿ ಇದೆ. ಅದೇ ದೆಹಲಿಯಲ್ಲಿ ನಿಮ್ಮನ್ನು ಜೈಲಿಗೆ ಹಾಕಿದಾಗ ಬಿಪಿ, ಶುಗರ್ ಹೆಚ್ಚಾಗಿದೆಯಂತೆ ಹೇಳಿ ಜಾಮೀನು ಪಡೆದುಕೊಂಡು ಬಂದಿದ್ದೀರಿ ಎಂದು ಯತ್ನಾಳ್ ಡಿಕೆಶಿ ಕಾಲೆಳದರು.
ನೀವು ಬ್ಯಾರಿಕೇಡ್ ಜಂಪ್ ಮಾಡುತ್ತೀರಾ ಎಂದರೆ ನೀವು ಫಿಟ್ ಆಗಿದ್ದೀರಿ ಅಂತಾ ಅರ್ಥ. ಆರೋಗ್ಯ ಸಮಸ್ಯೆ ಹೇಳಿ ಜೈಲಿನಿಂದ ಹೊರಗೆ ಬಂದಿದ್ದೀರಿ. ಇದನ್ನು ಕೋರ್ಟ್ ಪರಿಗಣಿಸಿ ಮತ್ತೆ ಜೈಲಿಗೆ ಡಿಕೆ ಶಿವಕುಮಾರ್ ಅವರನ್ನು ಕಳಿಸಬೇಕು ಎಂದು ಒತ್ತಾಯಿಸಿದರು.
- 5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು
- ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ
- ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ
- ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ
- ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ