ಮಗಳ ಮದುವೆ ಮುಗಿಸಿ, ಆಕೆಯನ್ನು ಪತಿಯ ಮನೆಗೆ ಕಳುಹಿಸಿದ ಕೆಲವೇ ಹೊತ್ತಿನಲ್ಲಿ ತಂದೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜರುಗಿದೆ. ಕಿಬ್ಬೆಟ್ಟ ಗ್ರಾಮದ ಕೃಷಿಕ ಚಿನ್ನಪ್ಪ (60) ಮೃತ ವ್ಯಕ್ತಿ.
ಕಲ್ಯಾಣ ಮಂಟಪದಲ್ಲಿ ತಮ್ಮ ದ್ವಿತೀಯ ಪುತ್ರಿಯ ವಿವಾಹ ಸಮಾರಂಭವನ್ನು ಮುಗಿಸಿ ವಧು-ವರರನ್ನು ಗೋಕಾಕ್ಗೆ ಕಳುಹಿಸಿದ ನಂತರ ಈ ಘಟನೆ ನಡೆದಿದೆ. ಹೃದಯಾಘಾತಕ್ಕೆ ಒಳಗಾದ ತಕ್ಷಣವೇ ಚಿನ್ನಪ್ಪನನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಇದನ್ನು ಓದಿ :ಕಾಳಿ ಸ್ವಾಮಿ ಮುಖಕ್ಕೆ ಮಸಿ ಬಳಿದ ಗುಂಪು – ಬೆಂಗಳೂರಿನಲ್ಲಿ ಕೃತ್ಯ
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಕಿಬ್ಬೆಟ್ಟ ಗ್ರಾಮದಲ್ಲಿ ನಡೆಯಲಿದೆ. ಮದುವೆ ಸಂಭ್ರಮದಲ್ಲಿದ್ದ ಕುಟುಂಬಸ್ಥರಲ್ಲಿ ಈಗ ನೀರವ ಮೌನ ಆವರಿಸಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ