ನವದೆಹಲಿ: ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಸೂಪರ್ ಸ್ಟಾರ್ ರಜಿನಿಕಾಂತ್ ಅವರಿಗೆ ನೀಡಿ ಗೌರವಿಸಲಾಗಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 67ನೇ ನ್ಯಾಷನಲ್ ಫಿಲ್ಮ್ ಅವಾರ್ಡ್ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ರಜಿನಿಗೆ ದಾದಾ ಸಾಹೇಬ್ ಪಾಲಿಕೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಈ ವೇಳೆ ಮಾತನಾಡಿದ ರಜಿನಿಕಾಂತ್, ಈ ಪ್ರಶಸ್ತಿಯನ್ನು ನನ್ನ ಗುರುಗಳಾದ ಕೆ.ಬಾಲಚಂದರ್ ಅವರಿಗೆ ಅರ್ಪಿಸುತ್ತೇನೆ. ಅಲ್ಲದೇ ಈ ವೇಳೆ ತಂದೆ ಸ್ಥಾನದಲ್ಲಿ ನಿಂತು ನನ್ನನ್ನು ಬೆಳೆಸಿದ, ಆಧ್ಯಾತ್ಮದಲ್ಲಿ ಆಸಕ್ತಿ ಮೂಡಿಸಿದ ನನ್ನ ಅಣ್ಣ ಸತ್ಯನಾರಾಯಣ್ ಗಾಯಕ್ವಾಡ್ ಹಾಗೂ ಕರ್ನಾಟಕದ ನನ್ನ ಸ್ನೇಹಿತ ಮತ್ತು ಬಸ್ ಚಾಲಕ ರಾಜ್ ಬಹದ್ದೂರ್ಗೆ ಅರ್ಪಿಸುತ್ತೇನೆ ಎಂದರು
ಅವರು ನನ್ನ ಪ್ರತಿಭೆಯನ್ನು ಗುರುತಿಸಿದ ಮೊದಲ ವ್ಯಕ್ತಿ. ಆರಂಭದಲ್ಲಿ ಅವರು ನನ್ನನ್ನು ಪ್ರೋತ್ಸಾಹಿಸಿದರು ಎಂದು ಹೇಳಿದ್ದಾರೆ. ವಿಶೇಷವೆಂದರ ತಮ್ಮ ಭಾಷಣದಲ್ಲಿ ಕೇವಲ ಈ ಮೂವರ ಹೆಸರು ಮಾತ್ರ ಹೇಳಿದ ರಜಿನಿಕಾಂತ್, ತಮಿಳುಜನರಿಗೂ ಧನ್ಯವಾದ ಅರ್ಪಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು