ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಬಹುತೇಕ ಸಜ್ಜಾಗಿದೆ
ತುಮಕೂರಿನ ಚಾಲುಕ್ಯ ಖಾಸಗಿ ಆಸ್ಪತ್ರೆ ಉದ್ಘಾಟನೆ ನೆಪದಲ್ಲಿ ಸಿದ್ದರಾಮಯ್ಯ ಜೊತೆ ವೇದಿಕೆ ಹಂಚಿಕೊಳ್ಳುತ್ತಿರುವ ಎಸ್.ಆರ್. ಶ್ರೀನಿವಾಸ್ ಇದೇ ಸಂದರ್ಭದಲ್ಲಿ ಬೃಹತ್ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನ ಮಾಡುವ ಪ್ಲಾನ್ನಲ್ಲಿದ್ದಾರೆ ಎನ್ನಲಾಗಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಪುತ್ರ ರಾಜೇಂದ್ರ ಉಪಸ್ಥಿತಿಯಿರಲಿದ್ದಾರೆ.
ಇತ್ತೀಚಿಗೆ ಪಕ್ಷದೊಳಗಿನ ಮನಸ್ತಾಪಗಳಿಂದ ಬೇಸತ್ತು ‘ಕೈ’ ಹಿಡಿಯುವ ಲೆಕ್ಕಾಚಾರದಲ್ಲಿದ್ದ ಎಸ್.ಆರ್. ಶ್ರೀನಿವಾಸ್ಗೆ ಅಕ್ಟೋಬರ್ 25 ರಂದು ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಕಡೆಗಣಿಸಿ ಶಾಶ್ವತವಾಗಿ ಜೆಡಿಎಸ್ ಬಾಗಿಲು ಮುಚ್ಚಿದ ಸಂದೇಶ ರವಾನಿಸಿತ್ತು.
ಇದೀಗ ದಳಕ್ಕೆ ಠಕ್ಕರ್ ಕೊಡಲು ರೆಡಿಯಾಗಿರೋ ಶಾಸಕ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೊತೆ ವೇದಿಕೆ ಹಂಚಿಕೊಳ್ಳುವ ತರಾತುರಿಯಲ್ಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು