KRS ಆಣೆಕಟ್ಟೆಯ 16 ಗೇಟ್ಗಳನ್ನುಈಗ ಬದಲಿಸಲಾಗಿದೆ. ಇನ್ನೂ 61 ಗೇಟ್ ಬದಲಿಸುವ ಕಾರ್ಯ ಅಂತ್ಯಗೊಂಡರೆ ಡ್ಯಾಂ ಮತ್ತಷ್ಟು ಭದ್ರವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೆಆರ್ಎಸ್ ಬಾಗಿನ ಕಾರ್ಯಕ್ರಮದ ವೇದಿಕೆಯಲ್ಲಿ ಬೊಮ್ಮಾಯಿ ಮಾತನಾಡಿ, ಆಷಾಢದಲ್ಲಿ ಕಾವೇರಿ ಜಲಾನಯನದ 4 ಡ್ಯಾಂಗಳು ತುಂಬಿರುವುದು ಸಂತಸದ ವಿಷಯವಾಗಿದೆ. ಕಾವೇರಿ ಹಳೇ ಮೈಸೂರು ಭಾಗದ ಜೀವನದಿ. ಪವಿತ್ರವಾದ ನದಿಯ ಸದುಪಯೋಗ ಮಾಡಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನೂ ಕೂಡ ಡ್ಯಾಂನ 61 ಗೇಟ್ ಬದಲಿಸಬೇಕಾಗಿದೆ. ಒಂದೂವರೆ ವರ್ಷದಲ್ಲಿ ಈ ಕಾಮಗಾರಿ ಮುಗಿಯಬೇಕು. ಗೇಟ್ ಕಾಮಗಾರಿಗೆ 160 ಕೋಟಿ ರೂ. ನೀಡಲಾಗಿದೆ. ಎಲ್ಲಾ ಗೇಟ್ ಬದಲಿಸಿದ ಬಳಿಕ ಕೆಆರ್ಎಸ್ನಲ್ಲಿ ದೊಡ್ಡ ಹಬ್ಬ ಮಾಡೋಣ ಎಂದು ಹೇಳಿದರು.
ಕೆಆರ್ ಎಸ್ ನಲ್ಲಿ ಕಾವೇರಿ ಮಾತೆಗೆ ಬಾಗೀನ ಸಮರ್ಪಿಸಿದ ಸಿಎಂ ಬೊಮ್ಮಾಯಿ
ಮೈಸೂರು ಮಹಾರಾಜರು ಡ್ಯಾಂ ಕಟ್ಟಲು ಮಾಡಿದ ತ್ಯಾಗ ಮರೆಯಲು ಸಾಧ್ಯವಿಲ್ಲ. 2008 ರಲ್ಲಿ ನಾನು ನೀರಾವರಿ ಸಚಿವನಾಗಿದ್ದಾಗ ಕೆಆರ್ಎಸ್ ಗೇಟ್ ರಂಧ್ರಗಳಾಗಿ ನೀರು ಸೋರುತ್ತಿತ್ತು. ಆ ಪರಿಸ್ಥಿತಿಯಲ್ಲಿ 300 ಕ್ಯೂಸೆಕ್ ನೀರು ಹರಿದು ಹೋಗುತ್ತಿತ್ತು. ಪ್ರತಿ ಹನಿಯನ್ನು ಉಳಿಸಿಕೊಳ್ಳಲು ಸಂಕಲ್ಪ ಮಾಡಿದ್ದೆವು. ಆ ಸಂದರ್ಭದಲ್ಲಿ ಗೇಟ್ ರಿಪೇರ್ ಮಾಡದಂತೆ ಒತ್ತಡಗಳು ಬಂತು. ಅವತ್ತು ರಾತ್ರಿ ನನಗೆ ನಿದ್ದೆ ಬರಲಿಲ್ಲ. ಮಾರನೇ ದಿನ ಬೆಳಗ್ಗೆ ಅಧಿಕಾರಿಗಳನ್ನು ಕರೆದು ಗೇಟ್ ಬದಲಿಸಲು ಹೇಳಿದೆ ಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment