October 16, 2024

Newsnap Kannada

The World at your finger tips!

renukaswamy

ದರ್ಶನ್‌ , ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಪೂರ್ಣ- ಅ.14ರಂದು ಆದೇಶ ಪ್ರಕಟ

Spread the love

ಬೆಂಗಳೂರು:ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯ ತೀರ್ಮಾನ ಅಕ್ಟೋಬರ್ 14 ರಂದು ಪ್ರಕಟವಾಗಲಿದೆ.

ಸೆಷನ್ಸ್‌ ಕೋರ್ಟ್‌ನಲ್ಲಿ ನ್ಯಾಯಮೂರ್ತಿ ಜೈಶಂಕರ್‌ ಅವರು ಇಂದು ಸುದೀರ್ಘ ವಿಚಾರಣೆ ನಡೆಸಿ, ವಿಚಾರಣೆಯನ್ನು ಮುಕ್ತಾಯಗೊಳಿಸಿ ಅ.14 ರಂದು ಜಾಮೀನು ಅರ್ಜಿಯ ಮೇಲೆ ತೀರ್ಪು ಪ್ರಕಟಿಸುವುದಾಗಿ ಘೋಷಿಸಿದರು.

ದರ್ಶನ್‌ ಪರ ಹಿರಿಯ ಕ್ರಿಮಿನಲ್‌ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ, ಪೊಲೀಸರ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ (SPP) ಪ್ರಸನ್ನ ಕುಮಾರ್ ವಾದಿಸಿದರು. ಬುಧವಾರ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ಮುಗಿದ ಬಳಿಕ, ಕೋರ್ಟ್‌ ಅ.14 ರಂದು ಇಬ್ಬರ ಜಾಮೀನು ಕುರಿತಾದ ತೀರ್ಪನ್ನು ಪ್ರಕಟಿಸಲು ತೀರ್ಮಾನಿಸಿತ್ತು.ಅಡಿಕೆ ವ್ಯಾಪಾರಿಗನ್ನು ಬೆದರಿಸಿ 17 ಲಕ್ಷ ದರೋಡೆ: 7 ಆರೋಪಿಗಳ ಬಂಧನ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಬಳ್ಳಾರಿ ಜೈಲಿನಲ್ಲಿದ್ದರೆ, ಪವಿತ್ರಾ ಗೌಡ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ.

Copyright © All rights reserved Newsnap | Newsever by AF themes.
error: Content is protected !!