ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ದರ್ಶನ್ಗೆ, ಆರೋಗ್ಯ ಸಂಬಂಧಿತ ಕಾರಣಗಳಿಂದ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.
ದರ್ಶನ್ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆ ಪಡೆಯಲು ಕೋರಿ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಈ ತೀರ್ಮಾನ ಕೈಗೊಂಡಿದೆ. ದರ್ಶನ್ ಪರ ವಕೀಲ ಸಿ.ವಿ. ನಾಗೇಶ್, “ನೋವು ತೀವ್ರವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಗತ್ಯ,” ಎಂದು ಕೋರಿದ್ದು, 3 ತಿಂಗಳ ಮಧ್ಯಂತರ ಜಾಮೀನು ಕೋರಿ ಮನವಿ ಮಾಡಿದ್ದರು.
ಜೂನ್ 11ರಂದು ಶೂಟಿಂಗ್ಗಾಗಿ ಮೈಸೂರಿನಲ್ಲಿ ಇದ್ದ ದರ್ಶನ್ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆತರಲಾಗಿತ್ತು. 11 ದಿನಗಳ ತನಿಖಾ ಕಸ್ಟಡಿಯನ್ನು ಎದುರಿಸಿದ ಬಳಿಕ ಜೈಲು ಸೇರಲಾಯಿತು. ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಾಗ ಪಾರ್ಟಿ ಮಾಡಿದ ಚಿತ್ರಗಳು ವೈರಲ್ ಆದ ಕಾರಣ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಆಗಸ್ಟ್ 29ರಿಂದ ಬಳ್ಳಾರಿ ಜೈಲಿನಲ್ಲಿ ಇರಲಿದ್ದಾರೆ.
ನ್ಯಾಯಾಲಯದ ಆಲಿಸಿದ್ದ ವಾದ-ಪ್ರತಿವಾದಗಳಲ್ಲಿ ದರ್ಶನ್ ಪರ ವಕೀಲರು, “ನಡೆಯಲು ಅಥವಾ ಕುಳಿತುಕೊಳ್ಳಲು ಕಷ್ಟವಾಗುತ್ತಿರುವ ಸ್ಥಿತಿಯಲ್ಲಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅನಿವಾರ್ಯ” ಎಂದು ವಾದಿಸಿದರು. ಪ್ರಾಸಿಕ್ಯೂಷನ್ ಪರ ವಕೀಲರು ಈ ಮನವಿಗೆ ವಿರೋಧ ವ್ಯಕ್ತಪಡಿಸಿ, ವೈದ್ಯಕೀಯ ಮಂಡಳಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದರು.ಇದನ್ನು ಓದಿ –ಅಕ್ರಮ ಗೋವಾ ಮದ್ಯ ಜಪ್ತಿ: 5 ಲಕ್ಷ ರೂ. ಮೌಲ್ಯದ 144 ಬಾಟಲ್ ವಶಕ್ಕೆ
ಸಮಗ್ರ ವಿಚಾರಣೆ ಮಾಡಿದ ನ್ಯಾಯಮೂರ್ತಿ ಶೆಟ್ಟಿ, ಆರೋಗ್ಯ ಎಲ್ಲರ ಹಕ್ಕು ಎಂಬ ಅಭಿಪ್ರಾಯದೊಂದಿಗೆ ದರ್ಶನ್ಗೆ ಮಧ್ಯಂತರ ಜಾಮೀನು ನೀಡಲು ನಿರ್ಧರಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು