ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ದಕ್ಷಿಣ ಕಾಶಿ ಶಿವಗಂಗೆ ದೇವಸ್ಥಾನ ಹಾಗೂ ನೆಲಮಂಗಲ ಸ್ತಬ್ಧ ಚಿತ್ರ, ಬೆಂಗಳೂರು ನಗರದಿಂದ ಚಂದ್ರಯಾನ-3 ರ ಸ್ತಬ್ಧ ಚಿತ್ರ .
ಬೀದರ್ ಜಿಲ್ಲೆಯಿಂದ ಕೃಷ್ಣಮೃಗ ಸಂರಕ್ಷಣಾ ಧಾಮದ ಅರಣ್ಯ ಪ್ರದೇಶದ ಸ್ತಬ್ಧ ಚಿತ್ರ
ಚಾಮರಾಜನಗರ ಜಿಲ್ಲೆಯಿಂದ ಜಾನಪದ, ಭಕ್ತಿಯ ಬಿಡು ಹುಲಿ, ಆನೆಗಳ ಸಂತೃಪ್ತಿಯ ಕಾಡು ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.
ದಾವಣಗೆರೆ ಜಿಲ್ಲೆಯಿಂದ ಸಂತ ಸೇವಾವಾಲಾ ಹುಟ್ಟೂರು ಮತ್ತು ಬಂಜಾರ ಸಂಪ್ರದಾಯದ ಸ್ತಬ್ಧ ಚಿತ್ರ
ಧಾರವಾಡ ಜಿಲ್ಲೆಯಿಂದ ಧಾರವಾಡ ಪೇಡ ಧಾರವಾಡಿ ಎಮ್ಮೆ ನಮ್ಮ ಹೆಮ್ಮೆ ಎಂಬ ಸ್ತಬ್ಧ ಚಿತ್ರ
ಗದಗ ಜಿಲ್ಲೆಯಿಂದ ಸಬರಮತಿ ಆಶ್ರಮದ ಸ್ತಬ್ಧ ಚಿತ್ರ
ಹಾಸನ ಜಿಲ್ಲೆಯಿಂದ ಹಾಸನಾಂಬ ದೇವಾಲಯ, ಹಲ್ಮಿಡಿ ಶಾಸನ, ಈಶ್ವರ ದೇವಸ್ಥಾನ ಹಾಗೂ ಸಿದ್ದೇಶ್ವರ ದೇವಾಲಯದ ಸ್ತಬ್ಧಚಿತ್ರ ನಿರ್ಮಾಣವಾಗಿದೆ.
ಬಾಗಲಕೋಟೆ ಜಿಲ್ಲೆಯಿಂದ ರಾಜವಂಶ ಬಾದಾಮಿ ಚಾಲುಕ್ಯರ ಹಾಗೂ ಶ್ರೀ ಬನಶಂಕರಿ ಸ್ತಬ್ಧ ಚಿತ್ರ
ಬಳ್ಳಾರಿ ಜಿಲ್ಲೆಯಿಂದ ಕುಮಾರಸ್ವಾಮಿ ದೇವಸ್ಥಾನ, ಪಾರ್ವತಿ ದೇವಿ ದೇವಾಲಯ, ಕಸೂತಿ ಹಾಗೂ ನಾರಿಹಳ್ಳ ಅಣೆಕಟ್ಟು ಸ್ತಬ್ಧ ಚಿತ್ರ,
ಬೆಳಗಾವಿ ಜಿಲ್ಲೆಯಿಂದ ಮಹಾಲಿಂಗೇಶ್ವರ ದೇವಸ್ಥಾನ ,ಗೋಕಾಕ್ ಫಾಲ್ಸ್, ಸುವರ್ಣಸೌಧ, ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.
ಹಾವೇರಿ ಜಿಲ್ಲೆಯಿಂದ ಶಂಕದೊಂದಿಗೆ ಶ್ರೀ ಕನಕದಾಸರು ಹಾಗೂ ಗದ್ದಿಗೆ ಕಾಗಿನೆಲೆ ಸ್ತಬ್ಧ ಚಿತ್ರ
ಕಲಬುರಗಿ ಜಿಲ್ಲೆಯಿಂದ ರಾಜವಂಶಸ್ಥರ ಕೋಟೆ, ಚಿಂಚೋಳಿ ಅರಣ್ಯ ಪ್ರದೇಶ ವನ್ಯಜೀವಿಧಾಮದ ಸ್ತಬ್ಧ ಚಿತ್ರ, ಕೊಡಗು ಜಿಲ್ಲೆಯಿಂದ ಕೊಡಗಿನ ಪ್ರೇಕ್ಷಣೀಯ ಸ್ಥಳಗಳು
ಕೋಲಾರ ಜಿಲ್ಲೆಯಿಂದ ನರೇಗಾ ಯೋಜನೆ ಅಡಿ ವೀರಗಲ್ಲುಗಳ ಉತ್ಖನನ ಹಾಗೂ ಮರುಸ್ಥಾಪನೆಯ ಸ್ತಬ್ಧ ಚಿತ್ರ, ಕೊಪ್ಪಳ ಜಿಲ್ಲೆಯಿಂದ ಕಿನ್ನಾಳ ಕಲೆ ಹಾಗೂ ಕೈಮಗ್ಗ ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.
ಮಂಡ್ಯ ಜಿಲ್ಲೆಯಿಂದ ಸಾಂಪ್ರದಾಯಿಕ ಉದ್ಯಮ ಆಲೆಮನೆ ಕುರಿತ ಸ್ತಬ್ಧ ಚಿತ್ರ
ಮೈಸೂರು ಜಿಲ್ಲೆಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳ ಕುರಿತ ಸ್ತಬ್ಧ ಚಿತ್ರ
ರಾಯಚೂರು ಜಿಲ್ಲೆಯಿಂದ ನವರಂಗ ದರ್ವಾಜ ಹಾಗೂ ಆರ್ಟಿಫಿಎಸ್ ಸ್ತಬ್ಧ ಚಿತ್ರ
ರಾಮನಗರ ಜಿಲ್ಲೆಯಿಂದ ಚನ್ನಪಟ್ಟಣದ ಗೊಂಬೆಗಳು ಹಾಗೂ ಇತ್ಯಾದಿ ಕಲೆಗಳ ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.
ಶಿವಮೊಗ್ಗ ಜಿಲ್ಲೆಯಿಂದ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ, ಕುಪ್ಪಳ್ಳಿ, ಗುಡವಿ ಪಕ್ಷಿಧಾಮ, ಸಿಂಹಧಾಮ, ಶಿವಪ್ಪ ನಾಯಕ ಪ್ರತಿಮೆ
ತುಮಕೂರು ಜಿಲ್ಲೆಯಿಂದ ಮೂಡಲಪಾಯ ಯಕ್ಷಗಾನ, ತವರು ಕುರಿತ ಸ್ತಬ್ಧ ಚಿತ್ರ
ಉಡುಪಿ ಜಿಲ್ಲೆಯಿಂದ ತ್ಯಾಜ್ಯ ಮುಕ್ತ ಮತ್ಸ್ಯ ಸ್ನೇಹಿ ಸಮುದ್ರ ಕುರಿತ ಸ್ತಬ್ಧ ಚಿತ್ರ
ಉತ್ತರ ಕನ್ನಡ ಜಿಲ್ಲೆಯಿಂದ ಶರಾವತಿ ಮಡಿಲಲ್ಲಿ ವನ್ಯಜೀವಿ ಹಾಗೂ ಸಿಂಹದ ಬಾಲದ ಸಿಂಗಳಿಕ ಸಂರಕ್ಷಣೆ ಕುರಿತ ಸ್ತಬ್ಧ ಚಿತ್ರ ನಿರ್ಮಾಣಗೊಂಡಿದೆ.
ವಿಜಯಪುರ ಜಿಲ್ಲೆಯಿಂದ ಜ್ಞಾನ ಯೋಗಾಶ್ರಮದ ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಕುರಿತ ಸ್ತಬ್ಧ ಚಿತ್ರ, ವಿಜಯನಗರ ಜಿಲ್ಲೆಯಿಂದ ವಿಠಲ ದೇವಸ್ಥಾನದ ಕುರಿತ ಸ್ತಬ್ಧ ಚಿತ್ರ
ಯಾದಗಿರಿ ಜಿಲ್ಲೆಯಿಂದ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಏಕತೆಯಲ್ಲಿ ಅನೇಕತೆ ಎಂಬ ಸ್ತಬ್ಧ ಚಿತ್ರ
ಚಿಕ್ಕಮಗಳೂರು ಜಿಲ್ಲೆಯಿಂದ ಬೆಟ್ಟದಿಂದ ಬಟ್ಟಲಿಗೆ ಎಂಬ ಸ್ತಬ್ಧ ಚಿತ್ರ
ಚಿತ್ರದುರ್ಗ ಜಿಲ್ಲೆಯಿಂದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಸ್ತಬ್ಧ ಚಿತ್ರ
ದಕ್ಷಿಣ ಕನ್ನಡ ಜಿಲ್ಲೆಯಿಂದ ಪಿಲಿಕುಳ ಗುತ್ತಿನ ಮನೆ, ವಿವೇಕಾನಂದ ತಾರಾಲಯ ಹಾಗೂ ಬೀಚ್ ಸರ್ಫಿಂಗ್ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.
ವಿವಿಧ ಇಲಾಖೆಗಳಿಂದ 18 ಸ್ತಬ್ಧ ಚಿತ್ರಗಳು ನಿರ್ಮಾಣಗೊಂಡಿವೆ.
ಈ ಎಲ್ಲಾ ಸ್ತಬ್ದ ಚಿತ್ರಗಳು ಜಂಬೂ ಸವಾರಿ ತೆರಳುವ ಮಾರ್ಗದಲ್ಲಿ ತೆರಳಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು