ದಸರಾ ಜಂಬೂ ಸವಾರಿಗೆ ಮೆರಗು : 49 ವಿಶೇಷ ಸ್ತಬ್ಧ ಚಿತ್ರಗಳು 

Team Newsnap
5 Min Read

ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ 31 ಸ್ತಬ್ಧ ಚಿತ್ರಗಳು ಹಾಗೂ ವಿವಿಧ ಇಲಾಖೆಗಳ 18 ಸ್ತಬ್ಧ ಚಿತ್ರಗಳು ಸೇರಿದಂತೆ ಒಟ್ಟು 49 ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ದಕ್ಷಿಣ ಕಾಶಿ ಶಿವಗಂಗೆ ದೇವಸ್ಥಾನ ಹಾಗೂ ನೆಲಮಂಗಲ ಸ್ತಬ್ಧ ಚಿತ್ರ, ಬೆಂಗಳೂರು ನಗರದಿಂದ ಚಂದ್ರಯಾನ-3 ರ ಸ್ತಬ್ಧ ಚಿತ್ರ .

ಬೀದರ್ ಜಿಲ್ಲೆಯಿಂದ ಕೃಷ್ಣಮೃಗ ಸಂರಕ್ಷಣಾ ಧಾಮದ ಅರಣ್ಯ ಪ್ರದೇಶದ ಸ್ತಬ್ಧ ಚಿತ್ರ

ಚಾಮರಾಜನಗರ ಜಿಲ್ಲೆಯಿಂದ ಜಾನಪದ, ಭಕ್ತಿಯ ಬಿಡು ಹುಲಿ, ಆನೆಗಳ ಸಂತೃಪ್ತಿಯ ಕಾಡು ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.

ದಾವಣಗೆರೆ ಜಿಲ್ಲೆಯಿಂದ ಸಂತ ಸೇವಾವಾಲಾ ಹುಟ್ಟೂರು ಮತ್ತು ಬಂಜಾರ ಸಂಪ್ರದಾಯದ ಸ್ತಬ್ಧ ಚಿತ್ರ

ಧಾರವಾಡ ಜಿಲ್ಲೆಯಿಂದ ಧಾರವಾಡ ಪೇಡ ಧಾರವಾಡಿ ಎಮ್ಮೆ ನಮ್ಮ ಹೆಮ್ಮೆ ಎಂಬ ಸ್ತಬ್ಧ ಚಿತ್ರ

ಗದಗ ಜಿಲ್ಲೆಯಿಂದ ಸಬರಮತಿ ಆಶ್ರಮದ ಸ್ತಬ್ಧ ಚಿತ್ರ

ಹಾಸನ ಜಿಲ್ಲೆಯಿಂದ ಹಾಸನಾಂಬ ದೇವಾಲಯ, ಹಲ್ಮಿಡಿ ಶಾಸನ, ಈಶ್ವರ ದೇವಸ್ಥಾನ ಹಾಗೂ ಸಿದ್ದೇಶ್ವರ ದೇವಾಲಯದ ಸ್ತಬ್ಧಚಿತ್ರ ನಿರ್ಮಾಣವಾಗಿದೆ.

ಬಾಗಲಕೋಟೆ ಜಿಲ್ಲೆಯಿಂದ ರಾಜವಂಶ ಬಾದಾಮಿ ಚಾಲುಕ್ಯರ ಹಾಗೂ ಶ್ರೀ ಬನಶಂಕರಿ ಸ್ತಬ್ಧ ಚಿತ್ರ

ಬಳ್ಳಾರಿ ಜಿಲ್ಲೆಯಿಂದ ಕುಮಾರಸ್ವಾಮಿ ದೇವಸ್ಥಾನ, ಪಾರ್ವತಿ ದೇವಿ ದೇವಾಲಯ, ಕಸೂತಿ ಹಾಗೂ ನಾರಿಹಳ್ಳ ಅಣೆಕಟ್ಟು ಸ್ತಬ್ಧ ಚಿತ್ರ,

ಬೆಳಗಾವಿ ಜಿಲ್ಲೆಯಿಂದ ಮಹಾಲಿಂಗೇಶ್ವರ ದೇವಸ್ಥಾನ ,ಗೋಕಾಕ್ ಫಾಲ್ಸ್, ಸುವರ್ಣಸೌಧ, ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.

ಹಾವೇರಿ ಜಿಲ್ಲೆಯಿಂದ ಶಂಕದೊಂದಿಗೆ ಶ್ರೀ ಕನಕದಾಸರು ಹಾಗೂ ಗದ್ದಿಗೆ ಕಾಗಿನೆಲೆ ಸ್ತಬ್ಧ ಚಿತ್ರ

ಕಲಬುರಗಿ ಜಿಲ್ಲೆಯಿಂದ ರಾಜವಂಶಸ್ಥರ ಕೋಟೆ, ಚಿಂಚೋಳಿ ಅರಣ್ಯ ಪ್ರದೇಶ ವನ್ಯಜೀವಿಧಾಮದ ಸ್ತಬ್ಧ ಚಿತ್ರ, ಕೊಡಗು ಜಿಲ್ಲೆಯಿಂದ ಕೊಡಗಿನ ಪ್ರೇಕ್ಷಣೀಯ ಸ್ಥಳಗಳು

ಕೋಲಾರ ಜಿಲ್ಲೆಯಿಂದ ನರೇಗಾ ಯೋಜನೆ ಅಡಿ ವೀರಗಲ್ಲುಗಳ ಉತ್ಖನನ ಹಾಗೂ ಮರುಸ್ಥಾಪನೆಯ ಸ್ತಬ್ಧ ಚಿತ್ರ, ಕೊಪ್ಪಳ ಜಿಲ್ಲೆಯಿಂದ ಕಿನ್ನಾಳ ಕಲೆ ಹಾಗೂ ಕೈಮಗ್ಗ ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.

ಮಂಡ್ಯ ಜಿಲ್ಲೆಯಿಂದ ಸಾಂಪ್ರದಾಯಿಕ ಉದ್ಯಮ ಆಲೆಮನೆ ಕುರಿತ ಸ್ತಬ್ಧ ಚಿತ್ರ

ಮೈಸೂರು ಜಿಲ್ಲೆಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳ ಕುರಿತ ಸ್ತಬ್ಧ ಚಿತ್ರ

ರಾಯಚೂರು ಜಿಲ್ಲೆಯಿಂದ ನವರಂಗ ದರ್ವಾಜ ಹಾಗೂ ಆರ್ಟಿಫಿಎಸ್ ಸ್ತಬ್ಧ ಚಿತ್ರ

ರಾಮನಗರ ಜಿಲ್ಲೆಯಿಂದ ಚನ್ನಪಟ್ಟಣದ ಗೊಂಬೆಗಳು ಹಾಗೂ ಇತ್ಯಾದಿ ಕಲೆಗಳ ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.

ಶಿವಮೊಗ್ಗ ಜಿಲ್ಲೆಯಿಂದ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ, ಕುಪ್ಪಳ್ಳಿ, ಗುಡವಿ ಪಕ್ಷಿಧಾಮ, ಸಿಂಹಧಾಮ, ಶಿವಪ್ಪ ನಾಯಕ ಪ್ರತಿಮೆ

ತುಮಕೂರು ಜಿಲ್ಲೆಯಿಂದ ಮೂಡಲಪಾಯ ಯಕ್ಷಗಾನ, ತವರು ಕುರಿತ ಸ್ತಬ್ಧ ಚಿತ್ರ

ಉಡುಪಿ ಜಿಲ್ಲೆಯಿಂದ ತ್ಯಾಜ್ಯ ಮುಕ್ತ ಮತ್ಸ್ಯ ಸ್ನೇಹಿ ಸಮುದ್ರ ಕುರಿತ ಸ್ತಬ್ಧ ಚಿತ್ರ

ಉತ್ತರ ಕನ್ನಡ ಜಿಲ್ಲೆಯಿಂದ ಶರಾವತಿ ಮಡಿಲಲ್ಲಿ ವನ್ಯಜೀವಿ ಹಾಗೂ ಸಿಂಹದ ಬಾಲದ ಸಿಂಗಳಿಕ ಸಂರಕ್ಷಣೆ ಕುರಿತ ಸ್ತಬ್ಧ ಚಿತ್ರ ನಿರ್ಮಾಣಗೊಂಡಿದೆ.

ವಿಜಯಪುರ ಜಿಲ್ಲೆಯಿಂದ ಜ್ಞಾನ ಯೋಗಾಶ್ರಮದ ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಕುರಿತ ಸ್ತಬ್ಧ ಚಿತ್ರ, ವಿಜಯನಗರ ಜಿಲ್ಲೆಯಿಂದ ವಿಠಲ ದೇವಸ್ಥಾನದ ಕುರಿತ ಸ್ತಬ್ಧ ಚಿತ್ರ

ಯಾದಗಿರಿ ಜಿಲ್ಲೆಯಿಂದ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಏಕತೆಯಲ್ಲಿ ಅನೇಕತೆ ಎಂಬ ಸ್ತಬ್ಧ ಚಿತ್ರ

ಚಿಕ್ಕಮಗಳೂರು ಜಿಲ್ಲೆಯಿಂದ ಬೆಟ್ಟದಿಂದ ಬಟ್ಟಲಿಗೆ ಎಂಬ ಸ್ತಬ್ಧ ಚಿತ್ರ

ಚಿತ್ರದುರ್ಗ ಜಿಲ್ಲೆಯಿಂದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಸ್ತಬ್ಧ ಚಿತ್ರ

ದಕ್ಷಿಣ ಕನ್ನಡ ಜಿಲ್ಲೆಯಿಂದ ಪಿಲಿಕುಳ ಗುತ್ತಿನ ಮನೆ, ವಿವೇಕಾನಂದ ತಾರಾಲಯ ಹಾಗೂ ಬೀಚ್ ಸರ್ಫಿಂಗ್ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.

ವಿವಿಧ ಇಲಾಖೆಗಳಿಂದ 18 ಸ್ತಬ್ಧ ಚಿತ್ರಗಳು ನಿರ್ಮಾಣಗೊಂಡಿವೆ.

  1. ಸ್ತಬ್ಧ ಚಿತ್ರ ಉಪಸಮಿತಿಯಿಂದ ಅರಮನೆ ವಾದ್ಯಗೋಷ್ಠಿಯ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.
  2. ಸ್ತಬ್ಧ ಚಿತ್ರ ಉಪಸಮಿತಿಯಿಂದ ಯುನೋ ಸ್ಕೋ ದಿಂದ ಗುರುತಿಸಲ್ಪಟ್ಟ ವಿಶ್ವ ಪಾರಂಪರಿಕ ಹೊಯ್ಸಳ ದೇವಸ್ಥಾನ, ಬೇಲೂರು ಹಳೇಬೀಡು, ಸೋಮನಾಥಪುರ ದೇವಾಲಯ, ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.
  3. ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಪೀಠಿಕೆ ಇಲಾಖೆಗಳ ಯೋಜನೆಗಳ ಕುರಿತ ಸ್ತಬ್ದ ಚಿತ್ರ ನಿರ್ಮಾಣವಾಗಿದೆ.
  4. ವಾರ್ತಾ ಮತ್ತು ಪ್ರಚಾರ ಇಲಾಖೆಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.
  5. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷ್ಮಿ ಯೋಜನೆ ಹಾಗೂ ಇತರೆ ಯೋಜನೆಗಳ ಕುರಿತ ಸ್ತಬ್ಧ ಚಿತ್ರ ನಿರ್ಮಾಣವಾಗಿದೆ.
  6. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಹಾಗೂ ಇಲಾಖೆಗೆ ಸಂಬಂಧಿಸಿದಂತೆ ಇತರೆ ಯೋಜನೆಗಳ ಕುರಿತ ಸ್ತಬ್ದ ಚಿತ್ರ ನಿರ್ಮಾಣವಾಗಿದೆ.
  7. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವತಿಯಿಂದ ಹಸಿವಿನಿಂದ ಯಾರು ಬಳಲಬಾರದು ಅದಕ್ಕಾಗಿ ಬಂದಿದೆ ಅನ್ನಭಾಗ್ಯ ಎಂಬ ಸ್ತಬ್ದ ಚಿತ್ರ ನಿರ್ಮಾಣವಾಗಿದೆ.
  8. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಶೌರ್ಯ, ನ್ಯಾಯ, ರಕ್ಷೆ ಕುರಿತ ಸ್ತಬ್ಧ ಚಿತ್ರ ನಿರ್ಮಾಣಗೊಂಡಿದೆ.
  9. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಅಂಗಾಂಗ ದಾನ ಆಶಾಕಿರಣ ಕುರಿತ ಸ್ತಬ್ದ ಚಿತ್ರ ನಿರ್ಮಾಣವಾಗಿದೆ.
  10. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ ವತಿಯಿಂದ ಕ್ಷೀರಭಾಗ್ಯ ಯೋಜನೆ ಕುರಿತು ಸ್ತಬ್ದ ಚಿತ್ರ ನಿರ್ಮಾಣಗೊಂಡಿದೆ.
  11. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಗೃಹಜೋತಿ, ಕೃಷಿ ಸೋಲಾರ್ ಸೆಟ್, ಈವಿ ಚಾರ್ಜರ್ ಪಾಯಿಂಟ್ ಕುರಿತ ಸ್ತಬ್ದ ಚಿತ್ರ ನಿರ್ಮಾಣಗೊಂಡಿದೆ.
  12. ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯ 1924 -2024 ಶತಮಾನೋತ್ಸವ ಕುರಿತ ಸ್ತಬ್ದ ಚಿತ್ರ ನಿರ್ಮಾಣಗೊಂಡಿದೆ.
  13. ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಲಕ್ಕುಂಡಿ ಬ್ರಹ್ಮ ಜಿನಾಲಯ ಕುರಿತ ತಬ್ದ ಚಿತ್ರ ನಿರ್ಮಾಣಗೊಂಡಿದೆ.
  14. ಕಾವೇರಿ ನೀರಾವರಿ ನಿಗಮ (ನಿ) ಮೈಸೂರು ವತಿಯಿಂದ ಸಹಭಾಗಿತ್ವದ ನೀರಾವರಿ ನಿರ್ವಹಣಾ ಪದ್ಧತಿಯ ಕುರಿತು ಸ್ತಬ್ದ ಚಿತ್ರ ನಿರ್ಮಾಣಗೊಂಡಿದೆ.
  15. ವಾಕ್ ಶ್ರವಣ ಸಂಸ್ಥೆಯಿಂದ ವಾಕ್ ಶ್ರವಣ ದೋಷದಿಂದ ಉತ್ತಮ ಜೀವನದೆಡೆಗೆ ಆಯುಷ್ ಕೊಡುಗೆ ಎಂಬ ಸ್ತಬ್ದ ಚಿತ್ರ ನಿರ್ಮಾಣಗೊಂಡಿದೆ.
  16. ಡಾಕ್ಟರ್ ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಲಿಡ್ಕರ್ ಅಪ್ಪಟ ಚರ್ಮ ಉತ್ಪನ್ನಗಳ ಆಗರ ಮತ್ತು ಚರ್ಮ ಕುಶಲಕರ್ಮಿಗಳ ಅಭಿವೃದ್ಧಿಯ ಆಶಾಕಿರಣ ಎಂಬ ಸ್ತಬ್ದ ಚಿತ್ರ ನಿರ್ಮಾಣಗೊಂಡಿದೆ.
  17. ಸಮಾಜ ಕಲ್ಯಾಣ ಇಲಾಖೆಯ ಇಂದ ಭಾರತೀಯ ಸಂವಿಧಾನ ಮತ್ತು ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತ ಸ್ತಬ್ಧ ಚಿತ್ರ ನಿರ್ಮಾಣಗೊಂಡಿದೆ.
  18. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವತಿಯಿಂದ ಸಂವಿಧಾನ ಪೀಠಿಕೆ ಓದು ಕಡ್ಡಾಯ ಎಂಬ ಸ್ತಬ್ಧ ಚಿತ್ರ ನಿರ್ಮಾಣಗೊಂಡಿದೆ.

ಈ ಎಲ್ಲಾ ಸ್ತಬ್ದ ಚಿತ್ರಗಳು ಜಂಬೂ ಸವಾರಿ ತೆರಳುವ ಮಾರ್ಗದಲ್ಲಿ ತೆರಳಲಿದೆ.

Share This Article
Leave a comment