ಮೈಸೂರು ದಸರಾದ ಸಿದ್ಧತೆ ಈಗಾಗಲೇ ಪ್ರಾರಂಭವಾಗಿದೆ. ಈಗ ಆ ಸಿದ್ಧತೆಯ ಮತ್ತೊಂದು ಭಾಗ ಪ್ರಾರಂಭವಾಗಿದೆ.
ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಮೈಸೂರಿನತ್ತ ಪ್ರಯಾಣ ಆರಂಭಿಸುವದಕ್ಕೆ ನಿನ್ನೆ ಚಾಲನೆ ದೊರೆತಿದೆ.
ಕೋರೋನಾ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಿಸಲು ನಿರ್ಧರಿಸಿರುವ ಸರ್ಕಾರ ಕ್ರಮಕ್ಕನುಗುಣವಾಗಿ ಕೇವಲ 5 ಆನೆಗಳನ್ನು ಮಾತ್ರ ಜಂಬೂ ಸವಾರಿಯಲ್ಲಿ ಬಳಸಲು ನಿರ್ಧಾರ ಮಾಡಲಾಗಿದೆ. ಈ ವರ್ಷ ದಸರಾ ಅಂಬಾರಿಯ ಸಾರಥ್ಯವನ್ನು ಅಭಿಮನ್ಯು (54) ಹೊರಲಿದ್ದಾನೆ. ಅಭಿಮನ್ಯುವಿನ ಜೊತೆಗೆ ವಿಜಯ (61) ಕಾವೇರಿ (42) ಗೋಪಿ (38) ಹಾಗೂ ವಿಕ್ರಮ (47)ರು ಇರಲಿದ್ದಾರೆ.
ಇಂದು, ಪ್ರತಿ ವರ್ಷದ ಸಂಪ್ರದಾಯದಂತೆ ಈ ವರ್ಷವೂ ಸಹ ತುಲಾ ಲಗ್ನದಲ್ಲಿ ಬೆಳಿಗ್ಗೆ 10:10 ರಿಂದ 11 ಗಂಟೆಯ ಸಮಯದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಅಭಿಮನ್ಯು ಪಡೆಯನ್ನು ಪೂಜಿಸಿ, ಗಜ ಪ್ರಯಾಣಕ್ಕೆ ಚಾಲನೆ ನೀಡಿದರು.
ಹುಣಸೂರಿನ ವೀರನಹೊಸಹಳ್ಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಚಾಲನೆ ನೀಡಲಾಯಿತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು