ಜಿಲ್ಲಾ ಪಂಚಾಯಿತಿ ಸಭಾಂಗದಲ್ಲಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳ ಸಿದ್ಧತೆ ಸಂಬಂಧ ವಿವಿಧ ಜಿಲ್ಲೆಗಳ ನೋಡೆಲ್ ಅಧಿಕಾರಿಗಳು ಹಾಗೂ ಕಲಾವಿದರೊಂದಿಗೆ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಸಮಾಜದ ಸಾಮರಸ್ಯ, ಸೌಹಾರ್ದತೆ ಪ್ರತಿಬಿಂಬಿಸುವ ಮತ್ತು ಸಮಾಜದ ಪರಿವರ್ತನೆಗೆ ಅನುಕೂಲವಾಗುವಂಥ ಪರಿಕಲ್ಪನೆ ಅಡಿಯಲ್ಲಿ ಸ್ತಬ್ಧಚಿತ್ರಗಳನ್ನು ರೂಪಿಸಿ ಎಂದು ಸಲಹೆ ನೀಡಿದರು.
ನಾರಾಯಣ ಗುರು ಸಮಾನತೆಗಾಗಿ ಶ್ರಮಿಸಿದರು. ದೇಶದಲ್ಲೇ ಮೊದಲು ಮಹಿಳೆಯರಿಗೆ ಶಿಕ್ಷಣವನ್ನು ಸಾವಿತ್ರಿ ಬಾಯಿ ಫುಲೆ ನೀಡಿದರು. ಸಮೃದ್ಧ ಭಾರತ ನಿರ್ಮಾಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ, ನೀರಾವರಿ, ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡಿ ಸಾಮಾಜಿಕ ನ್ಯಾಯದ ಪರ ಆಡಳಿತ ನಡೆಸಿದರು. ಹೀಗೆ ದೇಶದ ಹಲವಾರು ಮಹಾನ್ ಸಮಾಜ ಸುಧಾರಕರ ಬದುಕು, ಹೋರಾಟವನ್ನು ತಿಳಿಸಿಕೊಡುವ ಕೆಲಸವಾಗಬೇಕು ಎಂದರು.
ಕಲೆ ಎಂಬುದು ಒಂದು ಸೃಜನಶೀಲ ಕ್ರಿಯೆಯಾಗಿದ್ದು, ಜನರ ಮನಸ್ಸಿಗೆ ಮುದ ನೀಡುವ ಹಾಗೂ ಪ್ರಫುಲ್ಲವಾಗಿಸುವ ಶಕ್ತಿ ಹೊಂದಿದೆ. ಈ ಹಿನ್ನೆಲೆಯಲ್ಲಿ ಐತಿಹಾಸಿಕ ಚರಿತ್ರೆ, ಸ್ವಾತಂತ್ರ್ಯ ಹೋರಾಟ, ಸಾಂಸ್ಕøತಿಕ ಬದುಕು, ಸಂಗೀತ, ಸಾಹಿತ್ಯ ಸೇರಿದಂತೆ ಸಾಮಾಜಿಕ ಸಂದೇಶ ನೀಡುವ ಸ್ತಬ್ಧಚಿತ್ರಗಳನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಬೇಕು ಎಂದು ತಿಳಿಸಿದರು.
ಪ್ರತಿ ಜಿಲ್ಲೆಗೆ ಅದರದೇ ಆದಂತಹ ಐತಿಹಾಸಿಕ ಘಟನೆಗಳು ಇರುತ್ತವೆ. ವಿಭಿನ್ನ ಆಚಾರ, ವಿಚಾರಗಳು, ಕಲೆ, ಸಂಸ್ಕೃತಿಗಳನ್ನು ಒಳಗೊಂಡಿರುತ್ತವೆ. ಐತಿಹಾಸಿಕ ಮಾಹಿತಿ ಜೊತೆಗೆ ಜೀವಂತವಾಗಿ ನಡೆದಿರುವಂತೆ ಘಟನೆಗಳನ್ನು ಬಿಂಬಿಸುವ ಶಿಸ್ತುಬದ್ಧ ಎಲ್ಲರ ಕಣ್ಮನ ಸೆಳೆಯುವ ಕಲಾಕೃತಿ ಒಳಗೊಂಡಿರಲಿ ಎಂದು ತಿಳಿಸಿದರು.
ಸ್ತಬ್ಧಚಿತ್ರದ ಜೊತೆಗೆ ಆಯಾ ಜಿಲ್ಲೆಯ ಕಲಾತಂಡಗಳನ್ನು ನಿಯೋಜಿಸುವುದು. ಅಕ್ಕಪಕ್ಕದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಇರಬೇಕು. ಅನವಶ್ಯಕವಾಗಿ ಯಾರಿಗೂ ಅವಕಾಶ ನೀಡಬಾರದು. ಸ್ತಬ್ಧಚಿತ್ರದ ಅಳತೆಯಲ್ಲಿ ಯಾವುದೇ ಕಾರಣಕ್ಕೂ ವ್ಯತ್ಯಾಸ ಇರಬಾರದು. ಅಗಲ, ಎತ್ತರ, ಉದ್ದವು ಜಿಲ್ಲಾಡಳಿತ ನಿಗದಿಪಡಿಸಿದ ಅಳತೆಯನ್ನು ಮೀರಬಾರದು ಎಂದು ಸೂಚಿಸಿದರು.ಇದನ್ನು ಓದಿ – ಬರ ಅಧ್ಯಯನಕ್ಕೆ ಕೇಂದ್ರ ತಂಡ
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ಉಪಸ್ಥಿತರಿದ್ದರು.
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
This website uses cookies.
Leave a Comment