ಬಿಬಿಎಂಪಿಯ 198 ವಾರ್ಡ್ ಗಳಿಗೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೂಡ ನೀಡಿದೆ,ಬೆಂಗಳೂರಿನ 198 ವಾರ್ಡ್ ಗಳಿಗೆ ಮೀಸಲಾತಿ ಪ್ರಕಾರವೇ ಎರಡು ವಾರಗಳಲ್ಲೇ ಚುನಾವಣೆ ಘೋಷಣೆ ಮಾಡುವ ಹೊಣೆ ಚುನಾವಣಾ ಆಯೋಗದ ಮೇಲಿದೆ.
ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್ ಅಶೋಕ್, ಕರ್ನಾಟಕ ಮಟ್ಟಿಗೆ ಮಹತ್ವದ ಬೆಳವಣಿಗೆಯಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ಮದ್ಯಪ್ರದೇಶ ವರ್ಸಸ್ ಸುರೇಶ್ ಮಹಾಜನ್ ಕೇಸ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧದ ತೀರ್ಪಿನಲ್ಲಿ ಬಿಬಿಎಂಪಿ ಚುನಾವಣೆಗೆ ನಡೆಸೋದಕ್ಕೂ ಅನುಮತಿ ನೀಡಿದೆ ಎಂದರು.
ಈ ಪ್ರಕರಣದಲ್ಲಿ. ತ್ರೀ ಸದಸ್ಯ ಪೀಠದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ಸಂಬಂಧ ಪ್ರತ್ಯೇಕ ಕೇಸ್ ಮತ್ತು ಲೀಸ್ಟ್ ಆಗಲು ಮೂರು ತಿಂಗಳು ಕಾಲಾವಕಾಶವಿತ್ತು ಮಧ್ಯಪ್ರದೇಶ ಆದೇಶ ಆದ್ರೂ, ಎಲ್ಲಾ ರಾಜ್ಯಕ್ಕೂ ಅನ್ವಯ ಅಂತ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಹೀಗಾಗಿ ರಾಜ್ಯದಲ್ಲಿನ ಸ್ಥಳೀಯ ಸಂಸ್ಥೆ ಚುನಾವಣೆ ಮಾಡಬೇಕು ಅಂತ ಹೇಳಲಾಗಿದೆ ಎಂದರು.
ಎರಡು ವಾರದಲ್ಲಿ ಚುನಾವಣೆ ಘೋಷಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಸ್ಪಷ್ಟಪಡಿಸಿದೆ. ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಆಗಬೇಕಿದೆ ಎಂದರು.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
More Stories
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್