ಕ್ಷುಲ್ಲಕ ವಿಚಾರಕ್ಕೆ ಮಗಳು ಆತ್ಮಹತ್ಯೆ ಗೆ ಶರಣಾದರೆ, ಮಗಳ ಸಾವಿನ ಸುದ್ದಿ ತಿಳಿದ ಅಪ್ಪ ಆಘಾತ ಗೊಂಡ ಪರಿಣಾಮ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದಲ್ಲಿ ಜರುಗಿದೆ.
ತಳಗವಾದಿ ಗ್ರಾಮದ ರಾಜಣ್ಣನ ಪುತ್ರಿ ಬಾಂಧವ್ಯ (15) ಆತ್ಮಹತ್ಯೆ ಗೆ ಶರಣಾದರೆ, ರಾಜಣ್ಣ ( 65) ಹೃದಯಾಘಾತದಿಂದ ಸಾವನ್ನಪ್ಪಿದವರು. ವಿಶ್ವ ಅಪ್ಪಂದಿರ ದಿನವೇ ಮಗಳು ಹಾಗೂ ತಂದೆಯ ಅಂತ್ಯ ಸಂಸ್ಕಾರ ಮಾಡಲಾಗಿದೆ.
ರಾಜಣ್ಣನಿಗೆ 4 ಜನಹೆಣ್ಣು ಮಕ್ಕಳು. ಕೊನೆಯ ಮಗಳು ಬಾಂಧವ್ಯ ಯಾವುದೋ ಒಂದು ಕ್ಷುಲ್ಲಕ ವಿಚಾರಕ್ಕೆ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ನಾಲ್ಕು ಮಂದಿ ಹೆಣ್ಣು ಮಕ್ಕಳು ಮೂರು ಹೆಣ್ಣು ಮಕ್ಕಳು ಈಗಾಗಲೇ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಬಾಂಧವ್ಯ ಈ ವರ್ಷ 10 ನೇ ತರಗತಿಯಲ್ಲಿ ಉತ್ತಿರ್ಣಳಾಗಿದ್ದಾಳೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಹಣಕಾಸಿನ ತೊಂದರೆ ಉಂಟಾದ ಪರಿಣಾಮ ಮಗಳನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ದಾಖಲು ಮಾಡಲು ಪೋಷಕರು ಮಾತುಕತೆ ನಡೆಸಿದ್ದಾರೆ.
ಆದರೆ ಕೊನೆ ಮಗಳು ಬಾಂಧವ್ಯ ಎಲ್ಲಾ ಅಕ್ಕಂದಿರನ್ನು ಖಾಸಗಿ ಪದವಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿಸುತ್ತಿದ್ದಿರಿ ನನ್ನನ್ನು ಮಾತ್ರ ಸರ್ಕಾರಿ ಕಾಲೇಜಿಗೆ ಸೇರಿಸುತ್ತಿದ್ದಿರಿ. ಎಂದು ಮನೆಯಲ್ಲಿ ಗಲಾಟೆ ಮಾಡಿಕೊಂಡಿದ್ದಳು ಎನ್ನಲಾಗಿದೆ.
ಈ ಘಟನೆಯಿಂದ ಬೇಸತ್ತು ಬಾಂಧವ್ಯ ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಬಗ್ಗೆ ಮಾಹಿತಿ ತಿಳಿದ ಅಪ್ಪ ರಾಜಣ್ಣ ಆಘಾತಗೊಂಡರು. ಅವರಿಗೂ ಲೋ ಬಿಪಿ ಆಗಿದೆ. ತಕ್ಷಣವೇ ಅವರನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದರೊಳಗೆ ರಾಜಣ್ಣ ಕೂಡ ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ತಂದೆ , ಮಗಳ ಅಂತ್ಯಕ್ರಿಯೆ ತಗಳವಾದಿ ಗ್ರಾಮದಲ್ಲಿ ನಡೆಯಿತು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment