Karnataka

ಜೆಡಿಎಸ್ ಹೊಗಳಿದ ದಿ.ಅನಂತ್​ಕುಮಾರ್ ಪುತ್ರಿ: ರಾಜಕೀಯ ವಲಯದಲ್ಲಿ ಅಚ್ಚರಿ!

ಕೇಂದ್ರದ ಮಾಜಿ ಸಚಿವ ದಿವಂಗತ ಅನಂತ್​ಕುಮಾರ್ ಪುತ್ರಿ ವಿಜೇತಾ ಅನಂತ್​​​ಕುಮಾರ್ ಜೆಡಿಎಸ್​ ಹೊಗಳಿ ಟ್ವೀಟ್ ಮಾಡಿದ್ದಾರೆ.

ಈ ಟ್ವೀಟ್ ರಾಜಕೀಯ ವಲಯದಲ್ಲಿ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಕರ್ನಾಟಕ ರಾಜಕಾರಣ ಯಾಕೆ ಇಷ್ಟೊಂದು ಆಸಕ್ತಿದಾಯಕವಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಜೆಡಿಎಸ್ ಇಂದಿಗೂ ತುಂಬಾನೇ ಸ್ಟ್ರಾಂಗ್ ಆಗಿರುವ ರಾಜಕೀಯ ಪಕ್ಷವಾಗಿದೆ ಎಂದು ಬಣ್ಣಿಸಿದ್ದಾರೆ.

ವಿಜೇತಾ ಟ್ವೀಟ್​ಗೆ ಅಮನ್ ಎನ್ನುವ ಮತ್ತೊಬ್ಬ ಟ್ವಿಟರ್ ಯೂಸರ್​ ಹೌದು, ಹೌದು 1 ಅಥವಾ 2 ಲೋಕಸಭೆ ಕ್ಷೇತ್ರದಲ್ಲಿ ಮಾತ್ರ ಎಂದು ರಿಪ್ಲೈ ಮಾಡಿದರು.

ಈ ಟ್ವಿಟ್ ಗೆ ಪ್ರತಿಕ್ರಿಯೆ ನೀಡಿರುವ ವಿಜೇತಾ, ಎಲ್ಲವನ್ನೂ ಚುನಾವಣೆಯ ಗೆಲುವಿನ ಮೂಲಕ ಅಳೆಯಲು ಸಾಧ್ಯವಿಲ್ಲ ಎಂದಿದ್ದಾರೆ.

ವಿಜೇತ ಅವರ ಈ ಟ್ವೀಟ್​ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಬಹುಶಃ ನಿನ್ನೆಯಷ್ಟೇ ಬಸವರಾಜ್ ಬೊಮ್ಮಾಯಿ ಮೂಲತಃ ಜನತಾ ಪರಿವಾರದಿಂದ ಬಂದವರು. ಹೀಗಾಗಿ ಅವರು ಈ ರೀತಿಯ ಟ್ವೀಟ್ ಮಾಡಿದ್ದಾರೆಯೇ ಅನ್ನೋ ಕುತೂಹಲ ಮೂಡಿಸಿದೆ.

ರಾಜ್ಯ ಕಂಡ ಅನೇಕ ಮುಖ್ಯಮಂತ್ರಿಗಳ ಹಿನ್ನೆಲೆ ಜನತಾ ಪರಿವಾರವಾಗಿದೆ. ರಾಮಕೃಷ್ಣ ಹೆಗಡೆ, ಎಸ್​​ಆರ್​ ಬೊಮ್ಮಾಯಿ, ಮ ದೇವೇಗೌಡ,  ಜೆಹೆಚ್​ ಪಾಟೀಲ್, ಸಿದ್ದರಾಮಯ್ಯ, ಬಸವರಾಜ್ ಬೊಮ್ಮಾಯಿ ಅವರ ಮೂಲ ರಾಜಕಾರಣ ಜನತಾ ಪರಿವಾರವಾಗಿದೆ. 

ವಿಜೇತ ಅವರು ಬಿಜೆಪಿ ಹಿನ್ನೆಲೆಯುಳ್ಳವರು. ಅವರ ತಂದೆ ಅನಂತ್​ಕುಮಾರ್ ಬಿಜೆಪಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದವರು. ಅವರ ತಾಯಿ ತೇಜಸ್ವಿನಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ

Newsnap Team
Leave a Comment
Share
Published by
Newsnap Team

Recent Posts

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More

May 15, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024