January 28, 2026

Newsnap Kannada

The World at your finger tips!

pragathi

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

Spread the love

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ,ಮಾನಸಿಕ ಅಸ್ವಸ್ಥ ಪುತ್ರಿ ಪ್ರಗತಿ (32) ತನ್ನ ತಾಯಿಯ ಶವದ ಜೊತೆ 4 ದಿನ ಕಳೆದು ಬಳಿಕ ತಾನೂ ಸಾವನ್ನಪ್ಪಿದ್ದಾರೆ .

ಜಯಂತಿ ಶೆಟ್ಟಿಯವರು ಅನಾರೋಗ್ಯದಿಂದ ಬಳಲುತ್ತಿದ್ದು ,3-4 ದಿನಗಳ ಹಿಂದೆ ತಮ್ಮ ಮನೆಯಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

3 ದಿನಗಳ ಕಾಲ ಮನೆಯಲ್ಲಿ ತಾಯಿಯ ಮೃತದೇಹದೊಂದಿಗೆ ಅಸ್ವಸ್ಥಗೊಂಡಿದ್ದ ಸ್ಥಿತಿಯಲ್ಲಿ ಬಿದ್ದಿದ್ದ ಪ್ರಗತಿಯನ್ನು ಸ್ಥಳೀಯರು ಹಾಗೂ ಪೊಲೀಸರ ಸಹಕಾರದಿಂದ ಮನೆಯ ಬಾಗಿಲು ಒಡೆದು, ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಾಗಿಸಿದ್ದಾರೆ.ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

ಆದರೆ ಪ್ರಗತಿಯು ಶನಿವಾರ ವಿಪರೀತ ಮಧುಮೇಹ ಉಂಟಾಗಿ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ .

error: Content is protected !!