Main News

ಪ್ರಮುಖ ಐದು ಖಾತೆಗಳಿಗೆ ಡಿಸಿಎಂ ಡಿಕೆಶಿ‌ ಪಟ್ಟು- ಬೆಂಬಲಿಗ ಶಾಸಕರ ಹಿತ ಕಾಪಾಡಲು ಬದ್ದ

ಬೆಂಗಳೂರು:

ದೆಹಲಿಯಲ್ಲಿ ಸಂಪುಟ ಕಸರತ್ತು ನಡೆಯುತ್ತಿರುವಾಗಲೇ ಪ್ರಮುಖ 5 ಖಾತೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಪಟ್ಟು ಹಿಡಿದಿದ್ದಾರೆ.

ದೆಹಲಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಜೊತೆ ನಡೆದ ಸಭೆಯಲ್ಲಿ 5 ಖಾತೆಗಳು ನನಗೆ ಬೇಕೇ ಬೇಕು ಎಂದು ಡಿಕೆಶಿ ಹಠ ಹಿಡಿದಿದ್ದಾರೆ.

ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಇಂಧನ, ಗೃಹ, ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್ ಖಾತೆ ನೀಡುವಂತೆ ಡಿಕೆಶಿ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರು ಅಭಿವೃದ್ಧಿ ಹಾಗೂ ಜಲಸಂಪನ್ಮೂಲ ನನಗೆ ಬೇಕು ಡಿಕೆಶಿ ಹೇಳಿದ್ದರೆ , ಬೆಂಬಲಿಗ ಶಾಸಕರಿಗೆ ಗೃಹ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಖಾತೆಯನ್ನು ಕೇಳಿದ್ದಾರೆ.

ಡಿಕೆ ಶಿವಕುಮಾರ್‌ ಸಿಎಂ ಪಟ್ಟ ಕೇಳಿದಾಗ ಹೈಕಮಾಂಡ್‌ ನಿರಾಕರಿಸಿ ಡಿಸಿಎಂ ಪಟ್ಟ ನೀಡಿತ್ತು. ಒಂದೇ ಡಿಸಿಎಂ ಇರಬೇಕು, ಬೇರೆ ಯಾರಿಗೆ ಡಿಸಿಎಂ ಕೊಡಬಾರದು ಎಂದು ಶಿವಕುಮಾರ್‌ ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯಂತೆ ಸಿದ್ದರಾಮಯ್ಯ ಸಂಪುಟದಲ್ಲಿ ಒಂದೇ ಡಿಸಿಎಂ ನೀಡಲಾಗಿದೆ. ಈಗ ಡಿಕೆ ಶಿವಕುಮಾರ್‌ ಹೊಸ ಬೇಡಿಕೆಯನ್ನು ಇರಿಸಿದ ಹಿನ್ನೆಲೆಯಲ್ಲಿ ಯಾರಿಗೆ ಈ ಖಾತೆಗಳನ್ನು ಹಂಚಿಕೆ ಮಾಡಬಹುದು ಎಂಬ ಕುತೂಹಲ ಹೆಚ್ಚಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024