ಕೋವಿಡ್ನಿಂದ(Covid – 19) ಮೃತರಾಗಿದ್ದ ಇಬ್ಬರ ಶವಗಳನ್ನು 15 ತಿಂಗಳ ನಂತರ ಹೊರತೆಗೆದ ಘಟನೆ ಬೆಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲಿ ಜರುಗಿದೆ
ಕೋವಿಡ್ ಏರಿಕೆ ಕಂಡ ಕಾಲಘಟ್ಟದಲ್ಲಿ ಸಂಬಂಧಿಕರೇ ತಮ್ಮವರ ಮೃತ ಶವಗಳನ್ನು ಪಡೆಯಲು ಹಿಂದೇಟು ಹಾಕುತ್ತಿದ್ದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ತಮ್ಮವರ ಸೋಂಕಿತ ಮೃತ ಶವದಿಂದ ತಮಗೆ ಕೊರೊನಾ ತಗುಲಬಹುದೆಂಬ ಭಯ ಹೆಚ್ಚಾಗಿತ್ತು. ಹೀಗಾಗಿ ಸರ್ಕಾರವೇ ಕಟ್ಟು ನಿಟ್ಟಿನ ಕ್ರಮಗಳ ಜೊತೆಗೆ ಶವವನ್ನು ಮಣ್ಣಲ್ಲಿ ಮಣ್ಣಾಗಿಸಲು ಮುಂದಾಗಿತ್ತು.
ಚಾಮರಾಜಪೇಟೆಯ ದುರ್ಗಾ(40) ಮತ್ತು ಕೆ.ಪಿ. ಅಗ್ರಹಾರದ ಮುನಿರಾಜು ಎಂಬುವವರು 2020ರ ಜುಲೈನಲ್ಲಿ ಕೊರೊನಾ ಸೋಂಕಿನಿಂದ ಬಳಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.
ಈ ವೇಳೆ ಮೃತರ ಶವಗಳನ್ನು ಪಡೆಯಲು ಕುಟುಂಬಸ್ಥರು ಕೂಡ ಹಿಂದೆಟು ಹಾಕಿದ್ದರು. ಈ ವೇಳೆ ಆಸ್ಪತ್ರೆ ಸಿಬ್ಬಂದಿ ಎರಡು ಶವಗಳನ್ನು ಶವಾಗಾರದಲ್ಲಿಟ್ಟು ಮರೆತು ಬಿಟ್ಟಿದ್ದರು.
ಕೊಳೆತು ಗಬ್ಬು ವಾಸನೆ ಎದ್ದಿದ್ದು ಪರಿಶೀಲನೆ ನಡೆಸಿದಾಗ ಶವಾಗಾರದಲ್ಲಿ ಈ ಮೃತದೇಹಗಳಿರುವುದು ಕಂಡು ಬಂದಿದೆ.
ಸದ್ಯ ಎರಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು