ಬೆಳಗಾವಿಯ ಖಾನಾಪುರದ ಸಾಮಾಜಿಕ ಕಾರ್ಯಕರ್ತ ಜಯಂತ್ ಮುಕುಂದ್ ತಿನೇಕರ್(62) ಮೇಲೆ ದ್ವಿಚಕ್ರ ವಾಹನದಲ್ಲಿ ಬಂದ ಏಳೆಂಟು ಜನರ ಗುಂಪೊಂದು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಪರಾರಿಯಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಜಯಂತ್ ಅವರನ್ನು ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಖಾನಾಪುರ-ಬೆಳಗಾವಿ ಹೆದ್ದಾರಿಯ ಝಾಡ್ ಶಹಾಪುರ ಬಳಿ ಹಿಂಬಾಲಿಸಿಕೊಂಡು ಬಂದ ಮುಸುಕುಧಾರಿಗಳು ಜಯಂತ್ ಅವರ ಕಾರು ತಡೆದು ಕಬ್ಬಿಣದ ರಾಡ್ಗಳಿಂದ ಥಳಿಸಿದ್ದಾರೆ.
ಈ ವೇಳೆ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಲ ಲಾರಿ ಚಾಲಕರು ಸಹಾಯಕ್ಕೆ ಧಾವಿಸಿದ್ದಾರೆ.
ಹಲ್ಲೆ ಮಾಡಿದ ಆರೋಪಿಗಳು ಅಪರಿಚಿತರಾಗಿದ್ದಾರೆ, ಮುಖಕ್ಕೆ ಸ್ಕಾರ್ಫ್ ಹಾಕಿಕೊಂಡಿದ್ದರು. ಹಲ್ಲೆ ವೇಳೆ ಜಯಂತ್ ಅವರ ಬಲಗಾಲು, ಮೊಣಕಾಲು, ಭುಜ ಹಾಗೂ ಬಲಗೈಗೆ ಗಂಭೀರ ಗಾಯಗಳಾಗಿವೆ.
ಖಾನಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಬೆಳಗಾವಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
This website uses cookies.
Leave a Comment