March 15, 2026

Newsnap Kannada

The World at your finger tips!

journalist

ಕೋವಿಡ್ ನಿಂದ ಸಾವು: ಪತ್ರಕರ್ತರ ಕುಟುಂಬಕ್ಕೆ ತಲಾ 10 ಸಾವಿರ ನೆರವು – ಕೆಯುಡಬ್ಲ್ಯೂಜೆ

Spread the love

ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ತಲಾ 10 ಸಾವಿರ ಪರಿಹಾರ ನೀಡಲು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀರ್ಮಾನಿಸಿದೆ.

ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.

ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ಕಳೆದ ವರ್ಷ ನೀಡಿದಂತೆ ಸರ್ಕಾರದಿಂದ 5ಲಕ್ಷ‌ರೂ ನೆರವು ಕೊಡಿಸಲು ನಿರ್ಣಯಿಸಲಾಗಿದೆ.

ಪತ್ರಕರ್ತರ ಕುಟುಂಬಕ್ಕೆ ಪಡಿತರ ಕಿಟ್ ಕೊಡಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರಿನಲ್ಲಿ ಪತ್ರಕರ್ತರ ಭವನ ನಿರ್ಮಾಣಕ್ಕೆ ಶೀಘ್ರವಾಗಿ ಶಂಕುಸ್ಥಾಪನೆ ಮಾಡಿಸಲು ತೀರ್ಮಾನಿಸಲಾಯಿತು

ಸಭೆಯಲ್ಲಿ ಅಗಲಿದ ಪತ್ರಕರ್ತರು ಮತ್ತು ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಭೆಯಲ್ಲಿ ಸಂಘದ ಪದಾಧಿಕಾರಿಗಳಾದ ಮತ್ತಿಕೆರೆ ಜಯರಾಂ, ಜೆ.ಸಿ.ಲೋಕೇಶ್, ಸಂಜೀವ ರಾವ್ ಕುಲಕರ್ಣಿ, ಬಂಗ್ಲೆ ಮಲ್ಲಿಕಾರ್ಜುನ, ಕಟ್ಟಡ ಸಮಿತಿ ಸದಸ್ಯರಾದ ಎಚ್.ಬಿ.ಮದನಗೌಡ ಮತ್ತಿತರರು ಹಾಜರಿದ್ದರು.

error: Content is protected !!