ಇಂದು ಹುಬ್ಬಳ್ಳಿಗೆ ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು.
ಹುಬ್ಬಳ್ಳಿಯಲ್ಲಿ ನಿನ್ನೆ ನಿಧನರಾದ ಸ್ನೇಹಿತ ಹಾಗೂ ಸಂಬಂಧಿ ರಾಜು ಪಾಟೀಲ್ ಅಂತಿಮ ದರ್ಶನಕ್ಕೆ ಇಂದು ಹುಬ್ಬಳ್ಳಿಗೆ ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದರು.
ಹುಬ್ಬಳ್ಳಿಯ ಶಕ್ತಿ ನಗರದಲ್ಲಿರುವ ಮೃತ ರಾಜು ಪಾಟೀಲ್ ಮನೆಗೆ ಭೇಟಿ ನೀಡಿದ ಸಿಎಂ, ಸ್ನೇಹಿತನ ನಿಧನಕ್ಕೆ ಮುಖ್ಯ ಮಂತ್ರಿ ಬೊಮ್ಮಾಯಿ ಬಿಕ್ಕಿ ಬಿಕ್ಕಿ ಕಣ್ಣೀರೂ ಹಾಕಿ, ವಿದಾಯ ಹೇಳಿದ್ದಾರೆ.
ಬಳಿಕ ಕುಟುಂಬಸ್ಥರ ಜೊತೆ ಮಾತನಾಡಿ ಧೈರ್ಯ ತುಂಬಿ ಸಾಂತ್ವನ ಹೇಳಿದರು.