ಮತ ಎಣಿಕೆ ಕೇಂದ್ರದಲ್ಲೇ ಹೃದಯಾಘಾತದಿಂದ ಚುನಾವಣಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಬುಧವಾರ ಬೆಳಿಗ್ಗೆ ಜರುಗಿದೆ.
ಪಿರಿಯಾಪಟ್ಟಣ ತಾಲ್ಲೂಕಿನ ಎನ್. ಶೆಟ್ಟಹಳ್ಳಿ ಗ್ರಾಮ ಪಂಚಾಯತ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿಯೋಜನೆಗೊಂಡಿದ್ದ ಲೋಕೋಪಯೋಗಿ ಇಲಾಖೆ ಅಭಿಯಂತರ ಬೋರೇಗೌಡ (52) ನಿಧನರಾದವರು.
ಪಟ್ಟಣದ ಪುಷ್ಪ ವಿದ್ಯಾಸಂಸ್ಥೆಯ ಆವರಣದಲ್ಲಿನ ಮತ ಎಣಿಕೆ ಕೇಂದ್ರಕ್ಕೆ ಬೆಳಿಗ್ಗೆ 7ಗಂಟೆಗೆ ಕರ್ತವ್ಯ ನಿಯೋಜನೆ ಗೆ ಆಗಮಿಸಿದ ಬೋರೇಗೌಡರು ಸಹೋದ್ಯೋಗಿಗಳೊಂದಿಗೆ ತಿಂಡಿ ಮುಗಿಸಿ ಮತ ಎಣಿಕೆ ಕೇಂದ್ರದ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಎದೆನೋವು ಕಾಣಿಸಿಕೊಂಡಿತು.
ಕೂಡಲೇ ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಹುಣಸೂರು ಬಳಿಯ ಮಾರ್ಗಮಧ್ಯೆ ಹೃದಯಾಘಾತದಿಂದ ಬೋರೆಗೌಡ ಕೊನೆಯುಸಿರೆಳೆದಿದ್ದಾರೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ