ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ರ ನಿಧನದಿಂದ ತೆರವಾಗಿರುವ ಉಪ ಸಭಾಪತಿ ಸ್ಥಾನಕ್ಕೆ ಜನವರಿ 29ರಂದು ಚುನಾವಣೆ ನಡೆಯಲಿದೆ.
ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ ಅಧಿಸೂಚನೆ ಹೊರಡಿಸಿದ್ದಾರೆ. , ವಿಧಾನ ಪರಿಷತ್ತಿನ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 8(1)ರ ಅನ್ವಯ ಉಪ ಸಭಾಪತಿಯವರ ಸ್ಥಾನಕ್ಕೆ ಚುನಾವಣೆಯನ್ನು ಹಂಗಾಮಿ ಸಭಾಪತಿಯವರು ಜ. 29 ರಂದು ನಡೆಸಲಿದ್ದಾರೆ.
ಜ. 28 ರ ಮಧ್ಯಾಹ್ನ 3 ಗಂಟೆಗೆ ಮೊದಲು ಯಾವುದೇ ಕಾಲದಲ್ಲಿ ಯಾವೊಬ್ಬ ಸದಸ್ಯನು ಇನ್ನೊಬ್ಬ ಸದಸ್ಯನನ್ನು ಉಪ ಸಭಾಪತಿಯನ್ನಾಗಿ ಆರಿಸುವ ಬಗ್ಗೆ ಕಾರ್ಯದರ್ಶಿಯವರಿಗೆ ಹೆಸರಿಸಿ, ವಿಧಾನಸೌಧದ ಕೊಠಡಿ ಸಂಖ್ಯೆ-156ಸಿ ಇಲ್ಲಿ ಲಿಖಿತ ಮೂಲಕ ಸೂಚನೆಯನ್ನು ಅಭ್ಯರ್ಥಿಯು ಅವರ ಹೆಸರನ್ನು ಸೂಚಿಸುವವರೊಂದಿಗೆ ಅಥವಾ ಅನುಮೋದಕರೊಂದಿಗೆ ಖುದ್ದಾಗಿ ಸಲ್ಲಿಸತಕ್ಕದ್ದು.
ಆ ಸೂಚನೆಯು ಮೂರನೇ ಸದಸ್ಯರಿಂದ ಅನುಮೋದಿಸತಕ್ಕದ್ದು ಮತ್ತು ಯಾವ ಸದಸ್ಯರ ಹೆಸರು ಸೂಚಿತವಾಗಿದೆಯೋ ಅವರು ತಾವು ಉಪ ಸಭಾಪತಿಯಾಗಿ ಚುನಾಯಿತರಾದಲ್ಲಿ, ಉಪ ಸಭಾಪತಿಯಾಗಿ ಸೇವೆ ಸಲ್ಲಿಸಲು ಒಪ್ಪಿರುವರೆಂದು ತಿಳಿಸುವ ಹೇಳಿಕೆಯನ್ನು ಸೂಚನೆಗೆ ಲಗತ್ತಿಸತಕ್ಕದ್ದು ಎಂದು ತಿಳಿಸಿದ್ದಾರೆ.
ಯಾವೊಬ್ಬ ಸದಸ್ಯನು ತನ್ನ ಹೆಸರನ್ನು ತಾನೇ ಸೂಚಿಸತಕ್ಕದ್ದಲ್ಲ ಅಥವಾ ತನ್ನ ಹೆಸರನ್ನು ಸೂಚಿಸುವ ಯಾವುದೇ ಪ್ರಸ್ತಾವವನ್ನು ಅನುಮೋದಿಸತಕ್ಕದ್ದಲ್ಲ. ಒಂದಕ್ಕಿಂತ ಹೆಚ್ಚು ಪ್ರಸ್ತಾವಗಳನ್ನು ಸೂಚಿಸತಕ್ಕದ್ದಲ್ಲ, ಅನುಮೋದಿಸತಕ್ಕದ್ದಲ್ಲ ಎಂದು ತಿಳಿಸಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment