ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ -ಹೆಚ್.ಡಿ. ಕುಮಾರಸ್ವಾಮಿ

Team Newsnap
1 Min Read

ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳಾಗಿ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಗಡದಿನ್ನಿ , ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಕಣಕ್ಕಿಳಿಯಲಿದ್ದಾರೆ.

ಇದನ್ನು ಓದಿ –ಸೊಸೆ ಹತ್ಯೆ ಮಾಡಿ ಗಂಡನ ಮನೆಯವರೇ ನೇಣು ಹಾಕಿದ್ದಾರೆ – ಮೃತಳ ಕುಟುಂಬದವರ ಆರೋಪ

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಕಣಕ್ಕಿಳಿಯಲಿದ್ದಾರೆ.ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ಅವರಿಗೆ ಟಿಕೆಟ್ ನೀಡಲಾಗಿದೆ. ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಶ್ರೀಶೈಲ ನಿಂಗಪ್ಪ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ವಾಯುವೆ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಸ್ಪರ್ಧಿಸಲಿದ್ದಾರೆ

Share This Article
Leave a comment