ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯವರಿಗೆ ಮುಂಬೈನ ಮಾದಕವಸ್ತು ನಿಯಂತ್ರಣ ಮಂಡಳಿ (ಎನ್ ಸಿ ಬಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ದೀಪಿಕಾ ಅವರ ಜೊತೆ ಫ್ಯಾಷನ್ ಡಿಸೈನರ್ ಸಿಮೋನ್ ಖಂಬಟ್ವಾ, ನಟಿ ರಕುಲ್ ಪ್ರೀತ್ ಸಿಂಗ್, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಅವರಿಗೂ ಎನ್ ಸಿ ಬಿ ನೋಟಿಸ್ ನೀಡಿದೆ.
ದೀಪಿಕಾ ಪಡುಕೋಣೆ ಮ್ಯಾನೇಜರ್ ಗೆ ‘ನನಗೆ ಗಾಂಜಾ ಬೇಡ. ಮಾಲ್ ಬೇಕು’ ಎಂದು ಸಂದೇಶ ಕಳಿಸಿರುವ ಬಗ್ಗೆ ಎನ್ ಸಿ ಬಿಯವರಿಗೆ ಮಾಹಿತಿ ದೊರಕಿದೆ. ಅಲ್ಲದೇ ರಿಯಾ ಚಕ್ರವರ್ತಿಯವರ ಹೇಳಿಕೆಯ ಆಧಾರದ ಮೇಲೆ ಎನ್ ಸಿ ಬಿ ದೀಪಿಕಾ ಅವರಿಗೆ ಸಮನ್ಸ್ ನೀಡಿದೆ.
ಅಲ್ಲದೇ ನಟಿ ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್, ರಾಕುಲ್ ಪ್ರೀತ್ ಸಿಂಗ್, ಫ್ಯಾಶನ್ ಡಿಸೈನರ್ ಸಿಮೋನ್ ಖಂಬಟ್ವಾ ಅವರಿಗೂ ಎನ್ ಸಿ ಬಿ ಸಮನ್ಸ್ ನೀಡುವ ಜೊತೆಗೆ ಯಾವಾಗ ವಿಚಾರಣೆಗೆ ಬರಬೇಕೆಂದು ದಿನಾಂಕವನ್ನೂ ಸಹ ಹೇಳಿದೆ.
ಸೆಪ್ಟಂಬರ್ 24 ರಂದು ಫ್ಯಾಷನ್ ಡಿಸೈನರ್ ಸಿಮೋನ್ ಖಂಬಟ್ವಾ, ನಟಿ ರಕುಲ್ ಪ್ರೀತ್ ಸಿಂಗ್, ಸೆಪ್ಟಂಬರ್ 25 ರಂದು ದೀಪಿಕಾ ಪಡುಕೋಣೆ, ಸೆಪ್ಟಂಬರ್ 26 ರಂದು ಶ್ರದ್ಧಾ ಕಪೂರ್ ಹಾಗೂ ಸಾರಾ ಅಲಿ ಖಾನ್ ಅವರಿಗೆ ವಿಚಾರಣೆಗೆ ಬರುವಂತೆ ಎನ್ ಸಿ ಬಿ ಹೇಳಿದೆ.
ಇವರ ವಿಚಾರಣೆ ಆದ ಮೇಲೆ ಇನ್ನೂ ಎಷ್ಟು ಮುಖಗಳು ಡ್ರಗ್ಸ್ ಪ್ರಕರಣದಲ್ಲಿ ಹೊರಬರಲಿವೆಯೋ?
ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು… Read More
ಬೆಂಗಳೂರು: ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ… Read More
ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
This website uses cookies.
Leave a Comment