ರಾಜ್ಯದಲ್ಲಿ ಅತಿ ನಿರೀಕ್ಷೆ ಮೂಡಿಸಿದ್ದ ಡಿಸಿಸಿ ಬ್ಯಾಂಕ್ ಚುಣಾವಣೆಯಲ್ಲಿ
ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಸಮೀಪ ಪ್ರತಿಸ್ಪರ್ಧಿ ಮಾಜಿ ಶಾಸಕ ಅರವಿಂದ ಪಾಟೀಲ್ ಅವರಿಂದ ಸೋತು ಮುಖಭಂಗ ಅನುಭವಿಸಿದ್ದಾರೆ.
ಶುಕ್ರವಾರ ಚುಣಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ನಾಯಕರ ವಿರೋಧದ ನಡುವೆಯೂ ಖಾನಾಪುರದಿಂದ ಸ್ಪರ್ಧಿಸಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ಕೇವಲ 2 ಮತಗಳ ಅಂತರದಿಂದ ಸೋತಿದ್ದಾರೆ. ಮಾಜಿ ಶಾಸಕ ಅರವಿಂದ್ ಅವರಿಗೆ 27 ಹಾಗೂ ಅಂಜಲಿಗೆ 25 ಮತಗಳು ಬಂದಿವೆ.
ಒಟ್ಟು 16 ಸ್ಥಾನಗಳ ಪೈಕಿ 13 ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದವು. ಉಳಿದ ಮೂರು ಕ್ಷೇತ್ರಗಳಲ್ಲಿ ಚುಣಾವಣೆ ಘೋಷಣೆಯಾಗಿತ್ತು. ಅವಿರೋಧ ಆಯ್ಕೆಗೆ ಬಗ್ಗೆ ಅಂಜಲಿ ಪ್ರತಿಕ್ರಿಯೆ ನೀಡಿ ಸೋಲು – ಗೆಲವು ಕಣದಲ್ಲಿಯೇ ನಿರ್ಧಾರವಾಗಲಿ ಎಂದು ಅಖಾಡಕ್ಕೆ ಇಳಿದಿದ್ದರು.
ಚುಣಾವಣೆಯಲ್ಲಿ ಸೋತರೂ ಸಹ ಅಂಜಲಿಯವರು ಡಿಸಿಸಿ ಬ್ಯಾಂಕ್ನ ಚುಣಾವಣೆಯಲ್ಲಿ ಸ್ಪರ್ಧಿಸಿದ ಮೊದಲ ಮಹಿಳಾ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದಾರೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್