ಮಂಗಳವಾರ ಬೆಳಗ್ಗೆ 10.40ಕ್ಕೆ ರಾಹುಲ್ ಮತ್ತು ಪ್ರಿಯಾಂಕ, ಮೊದಲು ಎಐಸಿಸಿ ಕಚೇರಿಗೆ ತೆರಳಿ ನಂತರ ಇಡಿ ಕಚೇರಿಗೆ ಬಂದರು.
ಆ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ಬ್ಯಾರಿಕೇಡ್ ದಾಟಿ ಬಂದಿದ್ದಕ್ಕಾಗಿ ಪೊಲೀಸರು ಬಂಧಿಸಿದರು.
ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಇಡಿ ಆಫೀಸಿನ ಹೊರಗಡೆ ಬಿಗುವಿನ ವಾತಾವರಣದ ನಡುವೆ ಅಧಿಕಾರಿಗಳು ರಾಹುಲ್ ಗಾಂಧಿ ವಿಚಾರಣೆಯನ್ನು ಆರಂಭಿಸಿದ್ದಾರೆ.
ಇದನ್ನು ಓದಿ –ಯಾವ ಪಕ್ಷ ಸೇರ್ತಾರೆ ಸಂಸದೆ ಸುಮಲತಾ ? ಕಾಂಗ್ರೆಸ್, ಬಿಜೆಪಿಯಿಂದಲೂ ದುಂಬಾಲು
ಹೊರಗಡೆ ಹಿರಿಯ ಕಾಂಗ್ರೆಸ್ ಮುಖಂಡರು ಸರಕಾರದ ವಿರುದ್ದ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಬಂಧಿತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ದೆಹಲಿಯ ಭದ್ರಾಪುರ ಮತ್ತು ನರೇಲಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.
ಎಐಸಿಸಿ ಕಚೇರಿಗೆ ಇತರ ಕಾಂಗ್ರೆಸ್ ಮುಖಂಡರ ಜೊತೆಗೆ ಆಗಮಿಸುತ್ತಿದ್ದ ಎಚ್. ಕೆ. ಪಾಟೀಲ್, ಡಿ. ಕೆ. ಸುರೇಶ್ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಪೊಲೀಸರು ತಡೆದಿದ್ದಾರೆ. ಯಾತಕ್ಕಾಗಿ ನಮ್ಮನ್ನು ತಡೆಯುತ್ತಿದ್ದೀರಾ? ಎಂದು ದಿನೇಶ್ ಗುಂಡೂರಾವ್ ಮತ್ತು ಸುರೇಶ್ ಪೊಲೀಸರ ಜೊತೆ ವಾಗ್ಯುದ್ದಕ್ಕೆ ಇಳಿದಿದ್ದಾರೆ. ಪೊಲೀಸರು ಕಾಂಗ್ರೆಸ್ ಮುಖಂಡರಿಗೆ ಮನವರಿಕೆ ಮಾಡುತ್ತಿದ್ದರೂ ಮಾತಿನ ಚಕಮಕಿ ಜೋರಾಗಿ ನಡೆಯುತ್ತಲೇ ಇತ್ತು.
ಆ ವೇಳೆ ಪೊಲೀಸರು, ಸುರೇಶ್ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಹಿಂದಕ್ಕೆ ಹೋಗುವಂತೆ ಜೋರಾಗಿ ತಳ್ಳಿದ್ದಾರೆ. ನಾನೊಬ್ಬ ಸಂಸದ, ನನ್ನನ್ನೇ ತಳ್ಳುತ್ತೀರಾ ಎಂದು ಡಿ. ಕೆ. ಸುರೇಶ್ ಏರು ಧ್ವನಿಯಲ್ಲಿ ಪೊಲೀಸರತ್ತ ಹೋದಾಗ ಅವರನ್ನು ಎಚ್. ಕೆ. ಪಾಟೀಲ್ ತಡೆದಿದ್ದಾರೆ. ಇದಾದ ನಂತರ, ಮತ್ತೆ ಯಾಕೆ ನಮ್ಮನ್ನು ಅರೆಸ್ಟ್ ಮಾಡುತ್ತಿದ್ದೀರಾ, ನಾವೇನು ತಪ್ಪು ಮಾಡಿದ್ದೇವೆ ಎಂದು ಸುರೇಶ್ ಅವರು ಪೊಲೀಸರ ಜೊತೆಗೆ ಮಾತಿಗೆ ಇಳಿದಾಗ, ಅವರನ್ನು ಪೊಲೀಸರು ಬಲವಂತದಿಂದ ತಳ್ಳಿ ಪೊಲೀಸ್ ವ್ಯಾನಿನಲ್ಲಿ ಕೂರಿಸಿ, ನರೇನಾ ಠಾಣೆಗೆ ಕರೆದೊಯ್ದಿದ್ದಾರೆ.
ಇದನ್ನು ಓದಿ –ಬೆಂಗಳೂರಿನ ರಾಷ್ಟ್ರೀಯ ಸೈನಿಕ ಶಾಲೆ : ಈ ವರ್ಷದಿಂದ ಮಹಿಳಾ ವಿದ್ಯಾರ್ಥಿನಿಯರಿಗೆ ಪ್ರವೇಶ
ನಮ್ಮ ನಾಯಕರು ಎಐಸಿಸಿ ಕಚೇರಿಗೆ ಹೋಗುತ್ತಿದ್ದರು, ಅವರನ್ನು ಆರೆಸ್ಟ್ ಮಾಡಿದ್ದಾರೆ, ಮ್ಯಾನ್ ಹ್ಯಾಂಡ್ಲಿಂಗ್ ಮಾಡಿದ್ದಾರೆ. ಸರ್ವಾಧಿಕಾರ ಇದು, ಇದನ್ನು ನಾನು ಖಂಡಿಸುತ್ತೇನೆ, ಬಿಜೆಪಿಯವರು ಎಮರ್ಜೆನ್ಸಿ ಬಗ್ಗೆ ಮಾತನಾಡುತ್ತಾರೆ. ಇದೇನು ಪ್ರಜಾಪ್ರಭುತ್ವವೇ? ಇದೇನು ಸರ್ವಾಧಿಕಾರವೇ? ಪೊಲೀಸ್ ಅಧಿಕಾರವೇ? ಪ್ರಜಾಪ್ರಭುತ್ವ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಅಧಿಕಾರದ ಮದ, ಅದಕ್ಕೆ ಇದನ್ನೆಲ್ಲ ಮಾಡುತ್ತಿದ್ದಾರೆ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment