ಕರ್ನಾಟಕ ರಾಜ್ಯಸರ್ಕಾರದ ಕಂದಾಯ ಇಲಾಖೆಯಲ್ಲಿ ಬರೋಬ್ಬರಿ 104 ಜನ ಕೆಎಎಸ್ ಅಧಿಕಾರಿಗಳು ಅರೋಪಿಗಳ ಪಟ್ಟ ಹೊತ್ತಿದ್ದಾರೆ. ಆದರೆ ಈ ಅಧಿಕಾರಿಗಳ ಬಗ್ಗೆ ಇದುವರೆಗೂ ಯಾವುದೇ ವಿಚಾರಣೆ ನಡೆದಿಲ್ಲ ಎಂಬುದು ಬಹಿರಂಗವಾಗಿದೆ.
ಹಲವು ವರ್ಷಗಳಿಂದ ಕಂದಾಯ ಇಲಾಖೆಯಲ್ಲಿರುವ ಅಧಿಕಾರಿಗಳು ಅನೇಕ ಗುರುತರ ಆರೋಪಗಳನ್ನು ಹೊಂದಿದ್ದಾರೆ. ಅಕ್ರಮವಾಗಿ ಖಾತೆ ಬದಲಾವಣೆ, ನ್ಯಾಯಾಲಯದ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸದಿರುವುದು, ಕರ್ನಾಟಕ ಭೂ ಸುಧಾರಣೆ ಕಾಯ್ದೆಯ ಉಲ್ಲಂಘನೆ, ವಂಶವೃಕ್ಷದ ಬದಲಾವಣೆ, ಸುಳ್ಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನ್ಯಾಯಾಲಯಗಳ ಆದೇಶದ ಉಲ್ಲಂಘನೆ, ಪಹಣಿಯಲ್ಲಿ ಸರ್ಕಾರಿ ಜಮೀನ ಕಡಿಮೆ ಅಳತೆ ತೋರಿಸುವಿಕೆ, ಅರಣ್ಯ ಪ್ರದೇಶದ ಭೂಮಾಫಿಯಾ ಹೀಗೆ ಅನೇಕ ಆರೋಪಗಳು ಕೆಎಎಸ್ ಅಧಿಕಾರಿಗಳ ಮೇಲಿವೆ.
ಕಂದಾಯ ಇಲಾಖೆಯಲ್ಲಿನ ಸೀನಿಯರ್ ಸೂಪರ್ ಟೈಂ ಸ್ಕೇಲ್, ಸೂಪರ ಟೈಂ ಸ್ಕೇಲ್, ಆಯ್ಜೆ, ಹಿರಿಯ, ಕಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಅವರ ಮೇಲಿರುವ ಆರೋಪದ ಪಟ್ಟಿಯನ್ನು ಕಂದಾಯ ಇಲಾಖೆ ಸಿದ್ಧಪಡಿಸಿದ್ದರೂ ಅದರ ಬಗೆಗಿನ ವರದಿಗಳನ್ನು ಇನ್ನೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸದೇ ಇರುವುದು ಬೆಳಕಿಗೆ ಬಂದಿದೆ.
ಈ ಆರೋಪಿತ ಅಧಿಕಾರಿಗಳ ಬಗೆಗೆ ಕಂದಾಯ ಇಲಾಖೆಯೂ ಸೊಲ್ಲೆತ್ತುತ್ತಿಲ್ಲ. ಈ ಅಧಿಕಾರಿಗಳ ವಿರುದ್ಧದ ಅನೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳುವುದು ಬಾಕಿ ಇದೆ.
ಡಾ. ಶಂಕರ್ ವಣಿಕ್ಯಾಳ, ಡಾ. ಬಿ.ವಿ. ವಾಸಂತಿ ಅಮರ್, ಕೆ. ರಂಗನಾಥ, ಜಿ.ವಿ. ಸೀನಪ್ಪ, ಎಂ.ಎಲ್. ವೈಶಾಲಿ, ಕುಸುಮ ಕುಮಾರಿ, ಟಿ. ಯೋಗೀಶ್, ಟಿ. ವೆಂಕಟೇಶ್, ಪಿ.ಎಸ್. ಮಂಜುನಾಥ್, ಗೋವಿಂದ ರೆಡ್ಡಿ, ಡಿ. ಭಾರತಿ, ಪಿ. ವಸಂತ್ ಕುಮಾರ್ ಐಎಎಸ್ ಇನ್ನೂ ಮುಂತಾದ ಅಧಿಕಾರಿಗಳು ಆರೋಪಗಳನ್ನು ಹೊತ್ತಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment