Karnataka

ಬೆಂಗಳೂರಿನಲ್ಲಿ ಕುರುಬರ ಸಮಾವೇಶ ರಸ್ತೆ ಸಂಚಾರದ ಪರ್ಯಾಯ ಮಾರ್ಗಗಳ ವಿವರ

ಬೆಂಗಳೂರಿನಲ್ಲಿ ಕುರುಬರ ಸಮಾವೇಶದ ಹಿನ್ನಲೆಯಲ್ಲಿ ಭಾನುವಾರ
ರಸ್ತೆ ಸಂಚಾರದ ಪರ್ಯಾಯ ಮಾರ್ಗಗಳ ಬದಲಾವಣೆ ಮಾಡಲಾಗಿದೆ.

ಕೆಲವು ಮುಖ್ಯ ರಸ್ತೆಗಳಲ್ಲಿ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ.
ಭಾರಿ ಪ್ರಮಾಣದ ಟ್ರಾಫಿಕ್​ನಿಂದ ಪಾರಾಗಲು ಬದಲಿ ಮಾರ್ಗದ ಮಾಹಿತಿಯ ಸಮಗ್ರ ವಿವರ ಇಲ್ಲಿದೆ.

  • ಭಾರೀ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ.
  • ತುಮಕೂರು ಮೂಲಕ ಬರುವ ವಾಹನಗಳು ಹೈದರಾಬಾದ್ ರಸ್ತೆ ತಲುಪಬೇಕಾದರೆ ಡಾಬಸ್‌ಪೇಟೆ – ದೊಡ್ಡಬಳ್ಳಾಪುರ – ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಮೂಲಕ ತಲುಪಬೇಕಿದೆ.
  • ಹೈದರಾಬಾದ್ ರಸ್ತೆಯಿಂದ ತುಮಕೂರು ರಸ್ತೆ ಪ್ರವೇಶಿಸುವವರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ – ದೊಡ್ಡಬಳ್ಳಾಪುರ – ಡಾಬಸ್‌ಪೇಟೆ ಮಾರ್ಗವಾಗಿ ತುಮಕೂರು ರಸ್ತೆಯನ್ನು ತಲುಪಬೇಕು. ತುಮಕೂರು ರಸ್ತೆಯಿಂದ ಹೊಸೂರು
  • ಮೈಸೂರು ರಸ್ತೆ ಮಾರ್ಗ ಪ್ರವೇಶಿಸಬೇಕಾದಲ್ಲಿ ಡಾಬಸ್‌ಪೇಟೆ – ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್, ಮಾಗಡಿ – ಮಾಗಡಿ ರಸ್ತೆ ನೈಸ್ ರೋಡ್ ಮೂಲಕ ಹೊಸೂರು, ಮೈಸೂರು ರಸ್ತೆಯನ್ನು ಸಂಪರ್ಕಿಸಬಹುದು.
  • ಮೈಸೂರು ಹಾಗೂ ಹೊಸೂರು ರಸ್ತೆಯಿಂದ ತುಮಕೂರು ರಸ್ತೆ ಪ್ರವೇಶಿಸಬೇಕಾದವರು ನೈಸ್ ಜಂಕ್ಷನ್ – ಮಾಗಡಿ ರಸ್ತೆ ನೈಸ್ ರೋಡ್ – ಮಾಗಡಿ – ಗುಡೆಮಾರನಹಳ್ಳಿ ಹ್ಯಾಂಡ್ ಪೋಸ್ಟ್ – ಡಾಬಸ್‌ಪೇಟೆ ಮಾರ್ಗವಾಗಿ ತುಮಕೂರು ರಸ್ತೆ ಹೋಗಬಹುದು.
  • ನೇರ ಬೆಂಗಳೂರಿಗೆ ತಲುಪಬೇಕಾದ ಭಾರೀ ವಾಹನಗಳು ಸಂಜೆಯವರೆಗೂ ಡಾಬಸ್‌ಪೇಟೆ ಪಾರ್ಕಿಂಗ್ ಸ್ಥಳದಲ್ಲಿ ಕಾಯಬೇಕು.
  • ಕುರುಬರ ಸಮಾವೇಶ ಮುಗಿದು ಪೊಲೀಸರ ಸೂಚನೆ ನಂತರವಷ್ಟೆ ಬೆಂಗಳೂರನ್ನು ಪ್ರವೇಶಿಸಲು ಅವಕಾಶ ನೀಡಲಾಗುವುದು.
  • ಬೆಂಗಳೂರು ನಗರದಿಂದ ತುಮಕೂರು ರಸ್ತೆ ಹಾಗೂ ಹಾಸನ ರಸ್ತೆ ಸಂಪರ್ಕಿಸಬೇಕಾದವರು ಮಾಗಡಿ ರಸ್ತೆ ಬಳಸುವುದು ಸೂಕ್ತ. ಬೆಂಗಳೂರು ನಗರ -ಮಾಗಡಿ ರಸ್ತೆ – ಮಾಗಡಿ – ಗುಡೆಮಾರನಹಳ್ಳಿ ಹ್ಯಾಂಡ್ ಪೋಸ್ಟ್‌ನಿಂದ ಹಾಸನ ರಸ್ತೆ ತಲುಪಬಹುದು. ಅಥವಾ ಬೆಂಗಳೂರು ನಗರ -ಮಾಗಡಿ ರಸ್ತೆ – ಮಾಗಡಿ – ಗುಡೆಮಾರನಹಳ್ಳಿ ಹ್ಯಾಂಡ್ – ಡಾಬಸ್‌ಪೇಟೆ ಮುಖಾಂತರ ತುಮಕೂರು ರಸ್ತೆ ತಲುಪಬಹುದಾಗಿದೆ.
Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜೂನ್ 16 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,900 ರೂಪಾಯಿ ದಾಖಲಾಗಿದೆ. 24… Read More

June 16, 2024

ಸೋಲಿಗೆ ಹತಾಶಯ ಬೇಡ,ದೃಢ ಸಂಕಲ್ಪದಿಂದ ಮುನ್ನುಗ್ಗಿ – ಎಂ.ಕೆ. ಸವಿತ

ಮೈಸೂರು : ಸೋಲಿಗೆ ಹತಾಶರಾಗಬೇಡಿ. ದೃಢ ಸಂಕಲ್ಪ ಮಾಡಿ ಮುನ್ನುಗಿದರೆ ಗೆಲುವು ಸುಲಭ ಎಂದು ಮೈಸೂರು ವಿಭಾಗದ ಪ್ರವಾಸೋಧ್ಯಮ ಇಲಾಖೆಯ… Read More

June 15, 2024

ಪೆಟ್ರೋಲ್ ಡಿಸೇಲ್ ಮೇಲಿನ ಸೆಸ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ರಾಜ್ಯ ಸರ್ಕಾರ ಜನತೆಗೆ ಬಹು ದೊಡ್ಡ ಶಾಕ್ ನೀಡಿದೆ. ಪೆಟ್ರೋಲ್,… Read More

June 15, 2024

ಶೀಘ್ರದಲ್ಲೇ ಜಿಪಂ, ತಾ ಪಂ ಚುನಾವಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಶೀಘ್ರದಲ್ಲೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರ… Read More

June 15, 2024

ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೇಂದ್ರ ಸಚಿವ ಎಚ್ ಡಿ ಕೆ

ಬೆಂಗಳೂರು : ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ… Read More

June 15, 2024

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ದರ್ಶನ್‌ ರವರಿಂದ ಸ್ಪೋಟಕ ಮಾಹಿತಿ

ಬೆಂಗಳೂರು : ಶೆಡ್‌ನಿಂದ ನಾನು ಬಂದ ಮೇಲೆ ಇವರೆಲ್ಲರು ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ದರ್ಶನ್‌… Read More

June 15, 2024