Karnataka

ಗ್ಯಾರಂಟಿ ಯೋಜನೆಗಳ ವಿವರ : ಅನುಷ್ಠಾನಗಳ ಮಾರ್ಗ ಸೂಚಿ

ಸರ್ಕಾರ ಘೋಷಿಸಿರುವ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವ ನಿಧಿ ಯೋಜನೆಗಳ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ವಿವರ ಹೀಗಿದೆ.

ಗೃಹ ಜ್ಯೋತಿ

ಪ್ರಣಾಳಿಕೆಯಲ್ಲಿ ಘೋಷಿಸಿದ 200 ಯುನಿಟ್‌ ವರೆಗೆ ಉಚಿತ ವಿದ್ಯುತ್‌ ಒದಗಿಸಲು ಸಚಿವ ಸಂಪುಟ ತೀರ್ಮಾನಿಸಿತು. ಈ ಯೋಜನೆಯಡಿ ಬಳಕೆದಾರರ ಕಳೆದ 12 ತಿಂಗಳ ವಿದ್ಯುತ್‌ ಬಳಕೆಯ ಸರಾಸರಿಯ ಮೇಲಿನ ಶೇ.10 ರಷ್ಟು ಉಚಿತ ವಿದ್ಯುತ್‌ ಒದಗಿಸಲಾಗುವುದು. ಜುಲೈ 1 ರಿಂದ ಬಳಕೆಯಾಗುವ ವಿದ್ಯುತ್‌ ಗೆ ಈ ಯೋಜನೆ ಅನ್ವಯವಾಗುತ್ತದೆ. ಅಲ್ಲಿಯ ವರೆಗಿನ ವಿದ್ಯುತ್‌ ಬಳಕೆಗೆ ಸಂಬಂಧಿಸಿದ ಬಿಲ್ಲನ್ನು ಬಳಕೆದಾರರು ಪಾವತಿಸಬೇಕು. ಆಗಸ್ಟ್ ತಿಂಗಳಿನಿಂದ ಈ ಯೋಜನೆಯ ಫಲಾನುಭವಿಗಳು ವಿದ್ಯುತ್ ಬಿಲ್ ಕಟ್ಟಬೇಕಿಲ್ಲ ಎಂದು ಸಿದ್ದರಾಮಯ್ಯ ಅವರು ಘೋಷಿಸಿದರು.

ಗೃಹ ಲಕ್ಷ್ಮಿ

ರಾಜ್ಯದಲ್ಲಿರುವ ಬಿಪಿಎಲ್‌ ಹಾಗೂ ಎಪಿಎಲ್‌ ಕುಟುಂಬಗಳ ಯಜಮಾನಿಯ ಖಾತೆಗೆ ಮಾಸಿಕ 2000 ರೂ. ಮೊತ್ತ ವರ್ಗಾವಣೆ ಮಾಡಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಮಹಿಳೆಯರು ಅರ್ಜಿ ಸಲ್ಲಿಸಬೇಕು. ಇದರಲ್ಲಿ ಮನೆಯ ಯಜಮಾನಿ ಯಾರು ಎಂಬುದನ್ನು ಘೋಷಿಸಬೇಕು, ಬ್ಯಾಂಕ್‌ ಖಾತೆ ಸಂಖ್ಯೆ, ಆಧಾರ್‌ ಸಂಖ್ಯೆ ಮಾಹಿತಿ ಒದಗಿಸಬೇಕು. ಜೂನ್‌ 15 ರಿಂದ ಜುಲೈ 15 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.

ಜುಲೈ 15 ರಿಂದ ಆಗಸ್ಟ್‌ 15ರ ಅವಧಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ, ಅಗತ್ಯ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಿ, ಆಗಸ್ಟ್‌ 15 ರಂದು ಸ್ವಾತಂತ್ರ್ಯ ದಿನಾಚರಣೆಯ ದಿನ ಈ ಯೋಜನೆಗೆ ಚಾಲನೆ ನೀಡಲಾಗುವುದು.

ಅನ್ನ ಭಾಗ್ಯ

ಹಿಂದಿನ ತಮ್ಮ ಸರ್ಕಾರದ ಅವಧಿಯಲ್ಲಿ ನೀಡಲಾಗುತ್ತಿದ್ದ 7 ಕೆಜಿ ಆಹಾರ ಧಾನ್ಯವನ್ನು ಬಿಜೆಪಿ ಸರ್ಕಾರವು 5 ಕೆಜಿಗೆ ಇಳಿಸಿದೆ. ಇದೀಗ ಆಹಾರಧಾನ್ಯದ ಪ್ರಮಾಣವನ್ನು 10 ಕೆಜಿಗೆ ಹೆಚ್ಚಿಸಲಾಗುವುದು. ಜೂನ್‌ ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಪ್ರಾರಂಭವಾಗಿರುವುದರಿಂದ ಹಾಗೂ ಆಹಾರ ಧಾನ್ಯ ಖರೀದಿಸಬೇಕಾಗಿರುವುದರಿಂದ ಜುಲೈ 1 ರಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು. ಅಂತ್ಯೋದಯ ಕಾರ್ಡುದಾರರು ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಈ ಯೋಜನೆ ಸೌಲಭ್ಯ ದೊರೆಯಲಿದೆ.

ಶಕ್ತಿ

ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್‌ಗಳನ್ನು ಹೊರತುಪಡಿಸಿ ಇತರ ಎಲ್ಲ ಬಸ್‌ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಜೂನ್‌ 11 ರಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಈ ಯೋಜನೆಯು ಶೇ. 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲಕರವಾಗಲಿದೆ. ಬಸ್‌ಗಳಲ್ಲಿ ಶೇ. 50 ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.

ಶೇ 94 ರಷ್ಟು ಉಚಿತ

ಐಷಾರಾಮಿ ಮತ್ತು ಎಸಿ ಹಾಗೂ ಸ್ಲೀಪಿಂಗ್ ಬಸ್ ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಬಸ್ ಗಳಲ್ಲೂ ಮಹಿಳೆಯರು ಉಚಿತವಾಗಿ ಓಡಾಡಲು ಅವಕಾಶ ಕೊಟ್ಟಿರುವುದರಿಂದ ಶೇ 94 ರಷ್ಟು ಬಸ್ ಗಳಲ್ಲಿ ಉಚಿತ ಅನುಕೂಲ ಒದಗಿಸಿದಂತಾಗಿದೆ.

ತೃತೀಯ ಲಿಂಗಿಗಳಿಗೂ ಉಚಿತ:

ಉಚಿತ ಬಸ್ ಪ್ರಯಣದ ಸವಲತ್ತನ್ನು ತೃತೀತ ಲಿಂಗಿಗಳಿಗೂ ಒದಗಿಸಲಾಗಿದೆ.

ಯುವನಿಧಿ

2022-23ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲ ವಿಧದ ಪದವೀಧರ ಯುವಕ-ಯುವತಿಯರು, ಡಿಪ್ಲೊಮಾ ಹೊಂದಿದವರಿಗೆ ಈ ಯೋಜನೆ ಅನ್ವಯಿಸುತ್ತದೆ. ಪದವಿ ಪಡೆದು 180 ದಿನಗಳಾದರೂ ಉದ್ಯೋಗ ದೊರೆಯದ ಪದವೀಧರರಿಗೆ 24 ತಿಂಗಳ ಅವಧಿಗೆ ಮಾಸಿಕ 3000 ರೂ. ಹಾಗೂ ಡಿಪ್ಲೊಮಾದಾರರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. ಈ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬೇಕಾಗಿದ್ದು, ಲಿಂಗತ್ವ ಅಲ್ಪಸಂಖ್ಯಾತರಿಗೂ ಈ ಸೌಲಭ್ಯ ಒದಗಿಸಲಾಗುವುದು.

Team Newsnap
Leave a Comment
Share
Published by
Team Newsnap

Recent Posts

ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವು

ವಿಜಯಪುರ: ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ… Read More

September 6, 2024

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ಕಲಿಸಿ ಸಮಾಜದಲ್ಲಿ ಒಂದು ಉತ್ತಮವಾಗಿ… Read More

September 5, 2024

ಗುರು ಎಂಬೊ ಅರಿವಿನ ವಿಸ್ತಾರ….

'ಗುರುವಿನ ಗುಲಾಮನಾಗುವ ತನಕದೊರೆಯದಣ್ಣ ಮುಕುತಿ".ಎಂದು ಪುರಂದರದಾಸರು ಗುರುವಿನ ಮಹಿಮೆಯನ್ನು ಬಹು ಹಿಂದೆಯೇ ಹೇಳಿದ್ದಾರೆ,  ಪ್ರಾಚೀನ ಕಾಲದಲ್ಲಿ ಗುರು ತನ್ನ ಶಿಷ್ಯನಿಗೆ  ತನ್ನ… Read More

September 5, 2024

ನಿಸ್ವಾರ್ಥ ಜೀವಿ ಜ್ಞಾನದ ಭುವಿ

"ಗುರುವಿನ ಗುಲಾಮನಾಗುವ ತನಕ ದೊರೆಯದೆನ್ನ ಮುಕುತಿ"ಎಂಬಂತೆ ವಿದ್ಯಾರ್ಥಿಗಳು ಗುರುವಿನ ಗುಲಾಮನಾದಾಗಲೇ ಅಪ್ರತಿಮ ಬದುಕು ರೂಪಿಸಿಕೊಳ್ಳುವನು ಎಂಬುದು ಅಕ್ಷರಶಃ ಸತ್ಯ.ಅಕ್ಷರಗಳ ಕಲಿಸುತ… Read More

September 5, 2024

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ… Read More

September 5, 2024

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ

ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್… Read More

September 5, 2024