ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದ ಯುವಕನ ರುಂಡ ಕತ್ತರಿಸಿದ ಆರೋಪಿಗಳ ಬಂಧನ

Team Newsnap
1 Min Read

ಬಿಜೆಪಿಯ ವಿವಾದಿತ ನಾಯಕಿ ನೂಪುರ್ ಶರ್ಮಾಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಬೆಂಬಲ ವ್ಯಕ್ತಪಡಿಸಿದ್ದ ಟೈಲರ್ ಕನ್ನಯ್ಯ ಲಾಲ್​ ಅವರ​ ರುಂಡ ಕತ್ತರಿಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನದ ಉದಯಪುರದ ಮಲ್ಡಾಸ್ ಸ್ಟ್ರೀಟ್​ನಲ್ಲಿರುವ ಟೈಲರಿಂಗ್ ಅಂಗಡಿಯೊಳಗೆ ಬಂದಿದ್ದ ದುಷ್ಕರ್ಮಿಗಳು ಬಟ್ಟೆ ಹೊಲಿಸಲು ಕೊಡುವ ಸೋಗಿನಲ್ಲಿ ಒಳಕ್ಕೆ ಹೋಗಿದ್ದ. ಅಲ್ಲಿ ಟೈಲರ್​ ಅಳತೆ ತೆಗೆದುಕೊಂಡು ಬರೆದುಕೊಳ್ಳುವಷ್ಟರಲ್ಲಿ ದಾಳಿ ನಡೆಸಿದ ಇವರು ಹಲ್ಲೆ ಮಾಡಿ, ರುಂಡ ಕತ್ತರಿಸಿ ಪರಾರಿಯಾಗಿದ್ದರು.

ಘಟನೆ ಬಳಿಕ ಸ್ಥಳದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಸೃಷ್ಟಿಯಾಗಿತ್ತು. ಕೂಡಲೇ ಕಾರ್ಯಾಚರಣೆಗಿಳಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಈ ಕೊಲೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಜೀವ ಬೆದರಿಕೆಯೊಡ್ಡಿದ್ದರು.

ಮುಖೇಶ್​ ಅಂಬಾನಿ ರಿಲಯನ್ಸ್‌ ಜಿಯೋ ನಿರ್ದೇಶಕ ಹುದ್ದೆಗೆ ರಾಜೀನಾಮೆ – ನೂತನ ಸಾರಥಿ ನೇಮಕ

ಮುಖ ಕಾಣಿಸದಂತೆ ಹೆಲ್ಮೆಟ್ ಹಾಕಿಕೊಂಡು ಬೈಕ್​ನಲ್ಲಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ರಜ್ಸಾಮಂಡ್ ಎಸ್​ಪಿ ಸುಧೀರ್ ಚೌಧರಿ ತಿಳಿಸಿದ್ದಾರೆ. ಬಂಧಿತರೇ ಆರೋಪಿಗಳು ಎನ್ನುವುದು ಖಚಿತವಾಗಿದೆ. ಅಲ್ಲದೆ ತನಿಖೆ ಕೈಗೊಂಡು ಇನ್ನುಳಿದ ಆರೋಪಿಗಳನ್ನೂ ಪತ್ತೆ ಮಾಡಲು ಹತ್ತು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article
Leave a comment