ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಆರ್.ಟಿ.ನಗರದ ನಿವಾಸದ ಬಳಿ ಬೀಡಾ ಅಂಗಡಿಯಲ್ಲಿ ಗಾಂಜಾ ಮಾರಾಟದ ಆರೋಪ ವ್ಯಕ್ತಿಯನ್ನು ಬಂಧಿಸಲಾಗಿದೆ.
ಉತ್ತರ ಪ್ರದೇಶದ ಮೂಲದ ವ್ಯಕ್ತಿಯೋರ್ವ ಸಿಎಂ ನಿವಾಸದ ಸ್ವಲ್ಪ ದೂರದಲ್ಲಿ ಬೀಡಾ ಅಂಗಡಿ ನಡೆಸುತ್ತಿದ್ದ.
ಅಲ್ಲಿ ಚಾಕ್ಲೇಟ್ ಕವರ್ನಲ್ಲಿ ಗಾಂಜಾ ಗುಳಿಗೆಯನ್ನು ಮಾರಾಟ ಮಾಡ್ತಿದ್ದ ಎಂದು ಆರೋಪಿಸಲಾಗಿದೆ.
ಚಾಕ್ಲೇಟ್ ಕವರ್ನಲ್ಲಿ ಗಾಂಜಾ ಗುಳಿಗೆ ಸುತ್ತಿ ಪ್ರತಿ ಒಂದು ಚಾಕ್ಲೇಟ್ಗೆ 50 ರಿಂದ 100 ರೂಪಾಯಿವರಗೆ ಆರೋಪಿ ಮಾರಾಟ ಮಾಡ್ತಿದ್ದ ಎನ್ನಲಾಗಿದೆ.
ಆರೋಪಿ ಗಾಂಜಾ ಗುಳಿಗೆಗಳನ್ನು ಉತ್ತರ ಪ್ರದೇಶದಿಂದ ತಂದು ‘ಸಾಯ್’ ಹೆಸರಿನ ಚಾಕ್ಲೇಟ್ ಕವರ್ನಲ್ಲಿ ಇಟ್ಟು ಮಾರುತ್ತಿದ್ದನೆಂದು ಹೇಳಲಾಗಿದೆ . ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಆರಂಭಿಸಿರುವ ಪೊಲೀಸರು, 5ಕೆಜಿ ಗಾಂಜಾ ಗುಳಿಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ