ನಮ್ಮದು ಕುಟುಂಬ ರಾಜಕಾರಣ ಅಲ್ಲ ಎಂದೇ ಸಾರಿ ಹೇಳುವ ದೇವೇಗೌಡರು, ಕುಮಾರಸ್ವಾಮಿ ಮತ್ತೆ ಕುಟುಂಬದ ಕುಡಿಗೆ ಹಾಸನದಲ್ಲಿ ಟಿಕೆಟ್ ನೀಡಿದ್ದಾರೆ.
ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ನಿಂದ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಸಿಗಬಹುದು ಅನ್ನೋ ಭರವಸೆಯನ್ನು ಹಲವರು ಹೊಂದಿದ್ದರು.
ಕೊನೆಗೆ ಮಾಜಿ ಸಚಿವ ಹೆಚ್ಡಿ. ರೇವಣ್ಣ ಪುತ್ರ ಸೂರಜ್ ರೇವಣ್ಣನಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಧಿಕೃತ ಘೋಷಣೆ ಮಾಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಸೂರಜ್ ರೇವಣ್ಣ ರಾಜಕೀಯ ಪ್ರವೇಶಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು.
ಈ ವಿಚಾರವಾಗಿ ದಳಪತಿಗಳು ಮಾತ್ರ ಗಪ್ಚುಪ್ ಆಗಿದ್ದರು. ಅಲ್ಲದೆ ಸಾಮಾನ್ಯ ಕಾರ್ಯಕತ೯ರನ್ನು ಕಡೆಗೆಣಿಸುವುದಿಲ್ಲ ಎಂದು ಹೇಳಿಕೊಂಡಿದ್ದ ದಳಪತಿಗಳು ಕುಟುಂಬ ರಾಜಕಾರಣವೇ ರಾಜ್ಯಕ್ಕೆ ಶೋಭೆ , ಶ್ರೇಷ್ಠ ಎನ್ನುವ ನಿಧಾ೯ರ ಪ್ರಕಟಿಸಿದ್ದಾರೆ
ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದು ಹಾಸನದಿಂದ ಸೂರಜ್ ರೇವಣ್ಣ ಸ್ಪರ್ಧಿಸಲಿದ್ದಾರೆ ಎಂದಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಕುಮರಸ್ವಾಮಿ ಶಾಸಕರು, ಮುಖಂಡರು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಈ ನಿರ್ಧಾರಕ್ಕೆ ಬಂದಿದ್ದೇವೆ ಇಂದು ಸೂರಜ್ ನಾಮಪತ್ರ ಸಲ್ಲಿಸಲಿದ್ದಾರೆಎಂದರು
ಕುಟುಂಬದಲ್ಲಿ ಎಷ್ಟು ಮಂದಿ ರಾಜಕೀಯ ಪ್ರವೇಶ ಮಾಡಿದ್ದಾರೆ? :
ಈಗಾಗಲೇ ಹೆಚ್.ಡಿ ರೇವಣ್ಣರ ಮೊದಲನೇ ಪುತ್ರ ಪ್ರಜ್ವಲ್ ರೇವಣ್ಣ ಹಾಸನ ಕ್ಷೇತ್ರದ ಸಂಸದರಾಗಿದ್ದಾರೆ.
ರೇವಣ್ಣರಂತೂ ಕಳೆದ ಮೂರು ದಶಕಗಳಿಂದ ರಾಜಕೀಯದಲ್ಲಿದ್ದಾರೆ.
ಅವರ ಪತ್ನಿ ಭವಾನಿ ರೇವಣ್ಣ ಕೂಡ ಸಕ್ರಿಯ ರಾಜಕೀಯದಲ್ಲಿದ್ದಾರೆ.
ದೇವೇಗೌಡರ ಮತ್ತೊಬ್ಬ ಪುತ್ರ ಹೆಚ್.ಡಿ ಕುಮಾರಸ್ವಾಮಿಯವರು ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಸಕ್ರಿಯ ರಾಜಕಾರಣದಲ್ಲಿದ್ದಾರೆ.
ದೇವೇಗೌಡರ ಇತರ ಹಲವು ಸಂಬಂಧಿಗಳು ಕೂಡ ಜೆಡಿಎಸ್ನಲ್ಲಿ ಸಕ್ರಿಯರಾಗಿದ್ದಾರೆ. ಮತ್ತೆ ಕೆಲವರು ಮುಂದಿನ ವಿಧಾನ ಸಭಾ ಚುನಾವಣೆಗೆ ಸ್ಪಧಿ೯ಸಲು ತುದಿಗಾಲಿನಲ್ಲಿ ನಿಂತಿದ್ದಾರೆ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಬುದ್ಧಿಮಾಂದ್ಯ ಬಾಲಕಿಗೆ ಪಕ್ಕದ ಮನೆಯವನಿಂದಲೇ ಅತ್ಯಾಚಾರ – ಆರೋಪಿ ಪರಾರಿ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್