Hassan

ದೇವೇಗೌಡರ ಕುಡಿ ರಾಜಕೀಯಕ್ಕೆ; ಸೂರಜ್​ ರೇವಣ್ಣಗೆ ಹಾಸನ ಟಿಕೆಟ್ ಘೋಷಣೆ : ಇಂದು ನಾಮಪತ್ರ

ನಮ್ಮದು ಕುಟುಂಬ ರಾಜಕಾರಣ ಅಲ್ಲ ಎಂದೇ ಸಾರಿ ಹೇಳುವ ದೇವೇಗೌಡರು, ಕುಮಾರಸ್ವಾಮಿ ಮತ್ತೆ ಕುಟುಂಬದ ಕುಡಿಗೆ ಹಾಸನದಲ್ಲಿ ಟಿಕೆಟ್ ನೀಡಿದ್ದಾರೆ.

ವಿಧಾನ ಪರಿಷತ್​ ಚುನಾವಣೆಗೆ ಜೆಡಿಎಸ್​ನಿಂದ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಸಿಗಬಹುದು ಅನ್ನೋ ಭರವಸೆಯನ್ನು ಹಲವರು ಹೊಂದಿದ್ದರು.

ಕೊನೆಗೆ ಮಾಜಿ ಸಚಿವ ಹೆಚ್​ಡಿ. ರೇವಣ್ಣ ಪುತ್ರ ಸೂರಜ್​ ರೇವಣ್ಣನಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಧಿಕೃತ ಘೋಷಣೆ ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಸೂರಜ್​ ರೇವಣ್ಣ ರಾಜಕೀಯ ಪ್ರವೇಶಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು.

ಈ ವಿಚಾರವಾಗಿ ದಳಪತಿಗಳು ಮಾತ್ರ ಗಪ್​ಚುಪ್​ ಆಗಿದ್ದರು. ಅಲ್ಲದೆ ಸಾಮಾನ್ಯ ಕಾರ್ಯಕತ೯ರನ್ನು ಕಡೆಗೆಣಿಸುವುದಿಲ್ಲ ಎಂದು ಹೇಳಿಕೊಂಡಿದ್ದ ದಳಪತಿಗಳು ಕುಟುಂಬ ರಾಜಕಾರಣವೇ ರಾಜ್ಯಕ್ಕೆ ಶೋಭೆ , ಶ್ರೇಷ್ಠ ಎನ್ನುವ ನಿಧಾ೯ರ ಪ್ರಕಟಿಸಿದ್ದಾರೆ

ರಾಜ್ಯಾಧ್ಯಕ್ಷ ಕುಮಾರ​ಸ್ವಾಮಿ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದು ಹಾಸನದಿಂದ ಸೂರಜ್​ ರೇವಣ್ಣ ಸ್ಪರ್ಧಿಸಲಿದ್ದಾರೆ ಎಂದಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಕುಮರಸ್ವಾಮಿ ಶಾಸಕರು, ಮುಖಂಡರು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಈ ನಿರ್ಧಾರಕ್ಕೆ ಬಂದಿದ್ದೇವೆ ಇಂದು ಸೂರಜ್​ ನಾಮಪತ್ರ ಸಲ್ಲಿಸಲಿದ್ದಾರೆಎಂದರು

ಕುಟುಂಬದಲ್ಲಿ ಎಷ್ಟು ಮಂದಿ ರಾಜಕೀಯ ಪ್ರವೇಶ ಮಾಡಿದ್ದಾರೆ? :

ಈಗಾಗಲೇ ಹೆಚ್​.ಡಿ ರೇವಣ್ಣರ ಮೊದಲನೇ ಪುತ್ರ ಪ್ರಜ್ವಲ್​ ರೇವಣ್ಣ ಹಾಸನ ಕ್ಷೇತ್ರದ ಸಂಸದರಾಗಿದ್ದಾರೆ.

ರೇವಣ್ಣರಂತೂ ಕಳೆದ ಮೂರು ದಶಕಗಳಿಂದ ರಾಜಕೀಯದಲ್ಲಿದ್ದಾರೆ.

ಅವರ ಪತ್ನಿ ಭವಾನಿ ರೇವಣ್ಣ ಕೂಡ ಸಕ್ರಿಯ ರಾಜಕೀಯದಲ್ಲಿದ್ದಾರೆ.

ದೇವೇಗೌಡರ ಮತ್ತೊಬ್ಬ ಪುತ್ರ ಹೆಚ್​.ಡಿ ಕುಮಾರಸ್ವಾಮಿಯವರು ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಸಕ್ರಿಯ ರಾಜಕಾರಣದಲ್ಲಿದ್ದಾರೆ.

ದೇವೇಗೌಡರ ಇತರ ಹಲವು ಸಂಬಂಧಿಗಳು ಕೂಡ ಜೆಡಿಎಸ್​ನಲ್ಲಿ ಸಕ್ರಿಯರಾಗಿದ್ದಾರೆ. ಮತ್ತೆ ಕೆಲವರು ಮುಂದಿನ ವಿಧಾನ ಸಭಾ ಚುನಾವಣೆಗೆ ಸ್ಪಧಿ೯ಸಲು ತುದಿಗಾಲಿನಲ್ಲಿ ನಿಂತಿದ್ದಾರೆ

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024