ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಮತ್ತು ಜಿಲ್ಲಾಧ್ಯಕ್ಷರ ಚುನಾವಣೆಯನ್ನು ಎರಡು ತಿಂಗಳ ಒಳಗಡೆ ಮಾಡುವಂತೆ ಹೈಕೋರ್ಟ್ ತಾಕೀತು ಮಾಡಿ, ಗಡುವಿನ ಆದೇಶ ಮಾಡಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠವು ಸರ್ಕಾರಕ್ಕೆ ಹಾಗೂ ಚುನಾವಣಾಧಿಕಾರಿಗೆ ಈ ಕುರಿತಂತೆ ಸ್ಪಷ್ಟ ಆದೇಶ ಮಾಡಿದೆ.
ನ್ಯಾಯಾಲಯದ ಆದೇಶದಂತೆ ಅಕ್ಟೋಬರ್ ಕೊನೆಯ ವಾರ ಅಥವಾ ನವಂಬರ್ ಮೊದಲನೇ ವಾರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ.
ಹೈಕೋರ್ಟ್ ನ ತೀರ್ಪಿನ ಆದೇಶದ ಪ್ರತಿ ತಲುಪಿದ ನಂತರ, ಆದೇಶದಲ್ಲಿ ರುವ ಸಂಗತಿ ಅರಿತು, ಈ ಕುರಿತಂತೆ ನಿರ್ಧಾರ ಕೈಗೊಳ್ಳಲು ಕಸಾಪ ಆಡಳಿತಾಧಿಕಾರಿಗಳು ಬಯಸಿದ್ದಾರೆಂದು ಮೂಲಗಳು ಹೇಳಿವೆ.
ಧಾರವಾಡ ಹೈಕೋರ್ಟ್ ನ ತೀರ್ಪಿನ ನಂತರ ಕಸಾಪ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿ, ಬಿರುಸಿನ ಪ್ರಚಾರ ಆರಂಭಿಸಿ ಬಿಟ್ಟಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ