ಕ್ರಿಕೆಟ್ ಮಾಂತ್ರಿಕ ಎಂಎಸ್ ಧೋನಿ ವೃತ್ತಿಪರ ಕ್ರಿಕೆಟಿಗ, ಆದರೆ ಅವರೊಬ್ಬ ಒಳ್ಳೆಯ ನಟರೂ ಹೌದು, ಅವರ ನಟನೆ ಹಾಗೂ ನೃತ್ಯ ಪ್ರತಿಭೆ ಅವರು ಅಭಿನಯಿಸಿರುವ ಜಾಹೀರಾತುಗಳ ಮೂಲಕ ಜಗಜ್ಜಾಹೀರಾಗಿದೆ. ಈಗ ಚಿತ್ರ ನಿರ್ಮಾಣಕ್ಕೂ ಧೋನಿ, ಕೈಜೋಡಿಸಿರುವುದು ದಕ್ಷಿಣದ ನಟಿ ಜೊತೆ!
ಸಿನಿಮಾ ಬಗ್ಗೆ ವಿಶೇಷ ಪ್ರೇಮವುಳ್ಳ ಎಂಎಸ್ ಧೋನಿ ಇದೀಗ ಅಧಿಕೃತವಾಗಿ ಚಿತ್ರರಂಗಕ್ಕೆ ಕಾಲಿಡಲು ಮುಂದಾಗಿದ್ದಾರೆ. ನಟನಾಗಿ ಅಲ್ಲ ಬದಲಿಗೆ ನಿರ್ಮಾಪಕನಾಗಿ.ಎಂಎಸ್ ಧೋನಿ, ದಕ್ಷಿಣ ಭಾರತದ ಜನಪ್ರಿಯ ನಟಿಯೊಬ್ಬರ ನೆರವಿನೊಂದಿಗೆ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಅದೂ ತಮಿಳು ಸಿನಿಮಾ ನಿರ್ಮಾಣಕ್ಕೆ ಮುಂದಾಗಿರುವುದು.
ಇದನ್ನು ಓದಿ : RRR ನ ಮತ್ತೊಂದು ದಾಖಲೆ ಮುರಿದ KGF 2
ತಮಿಳುನಾಡಿನೊಂದಿಗೆ ಧೋನಿಗೆ ವಿಶೇಷ ನಂಟು:
ತಮಿಳುನಾಡಿನಲ್ಲಿ ಧೋನಿಗೆ ದೊಡ್ಡ ಸಂಖ್ಯೆಯ ಅಭಿಮಾನಿ ಬಳಗವಿದೆ. ಧೋನಿಯನ್ನು ತಲಾ ಎಂದೇ ಕರೆಯುತ್ತಾರೆ ತಮಿಳುನಾಡು ಅಭಿಮಾನಿಗಳು.ಕೆಲವು ಸೀಸನ್ಗಳ ಐಪಿಎಲ್ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಧೋನಿ ವಿದಾಯ ಹೇಳಲಿದ್ದಾರೆ. ಆದರೆ ಸಿನಿಮಾ ಮೂಲಕ ತಮಿಳುನಾಡಿನೊಂದಿಗೆ ನಂಟು ಮುಂದುವರೆಸುವ ಇರಾದೆ ಧೋನಿಯದ್ದು.
ತಮಿಳು ಸಿನಿಮಾ ನಿರ್ಮಾಣ :
ಎಂಎಸ್ ಧೋನಿ, ತಮಿಳು ಸಿನಿಮಾ ನಿರ್ಮಾಣಕ್ಕೂ ಮುಂದಾಗಿದ್ದಾರೆ. ಸಿನಿಮಾ ನಿರ್ಮಾಣಕ್ಕೆ ಈಗಾಗಲೇ ಯೋಜನೆ ಸಿದ್ಧವಾಗಿದೆ , ಮುಖ್ಯ ಪಾತ್ರಧಾರಿಯೂ ಫಿಕ್ಸ್ ಆಗಿದ್ದಾಗಿದೆ. ಸಿನಿಮಾ ನಿರ್ಮಾಣಕ್ಕೆಂದು ಸಂಜಯ್ ಎಂಬುವರನ್ನು ಮ್ಯಾನೇಜರ್ ಮಾದರಿಯಲ್ಲಿ ಧೋನಿ ನೇಮಿಸಿಕೊಂಡಿದ್ದಾರೆ. ಸಂಜಯ್ ರಜನೀಕಾಂತ್ರ ಆಪ್ತ ಸಹ.
ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿ
ಎಂಎಸ್ ಧೋನಿ ನಿರ್ಮಾಣ ಮಾಡುತ್ತಿರುವ ಮೊದಲ ತಮಿಳು ಸಿನಿಮಾಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿ. ಧೋನಿ, ನಾಯಕಿ ಪ್ರಧಾನ ಸಿನಿಮಾ ನಿರ್ಮಾಣ ಮಾಡಲಿದ್ದಾರೆ, ಈ ಸಿನಿಮಾದಲ್ಲಿ ರಜನೀಕಾಂತ್ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ. ಈ ವರ್ಷಾಂತ್ಯಕ್ಕೆ ಧೋನಿಯ ಮೊದಲ ತಮಿಳು ಸಿನಿಮಾ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment