ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಪರಮ ಆಪ್ತ ವಲಯದಲ್ಲಿದ್ದ ಮೇಲುಕೋಟೆ ಶಾಸಕ ಸಿಎಸ್ ಪುಟ್ಟರಾಜು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರಾ ಎಂಬ ಶಂಕೆ ಈಗ ಬಲವಾಗುತ್ತಿದೆ.
ಶಾಸಕ ಜಮೀರ್,ಎಮ್ ಬಿ ಪಾಟೀಲ್ ಜೊತೆ ಪುಟ್ಟರಾಜು ದಿಢೀರ್ ಅಗಿ ಸಿದ್ದರಾಮಯ್ಯನವರ ನಿವಾಸದಲ್ಲಿ ಪ್ರತ್ಯಕ್ಷ್ಯವಾಗಿರುವುದು ಈ ಶಂಕೆಗೆ ಪುಷ್ಠಿ ನೀಡಿದಂತಾಗಿದೆ.
ಮೇಲುಕೋಟೆ ಕ್ಷೇತ್ರದಲ್ಲಿನ ದೇವಸ್ಥಾನದ ಉದ್ಘಾಟನೆಗಾಗಿ ಆಹ್ವಾನ ನೀಡಲು ಸಿದ್ದರಾಮಯ್ಯನವರ ನಿವಾಸಕ್ಕೆ ಹೋಗಿದ್ದರು ಎಂಬ ಮಾಹಿತಿಯೂ ಇದೆ. ಆ ನೆಪದಲ್ಲಿ ಸಿದ್ದು ಜೊತೆ ಸಿಎಸ್ ಪಿ ಮಾತುಕತೆ ನಡೆಸಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
ಕಳೆದ ಒಂದು ವಷ೯ದಿಂದಲೂ ಜೆಡಿಎಸ್ ನ ಅಧಿಪತಿ ಹೆಚ್ ಡಿ ಕುಮಾರಸ್ವಾಮಿ ಜೊತೆ ಸಂಬಂಧವನ್ನು ಕಡಿಮೆ ಮಾಡುತ್ತಾ ಬಂದಿರುವ ಪುಟ್ಟರಾಜು ನಡೆ ಬಗ್ಗೆ ಸಾಕಷ್ಟು ಬಾರಿ ಚಚೆ೯ಗಳೂ ಕೂಡ ರಾಜಕೀಯ ವಲಯದಲ್ಲಿ ನಡೆದಿವೆ.
ಈ ನಡುವೆ ಬೆಳಗಾವಿಯ ಅಧಿವೇಶನದ ವೇಳೆ ಕೈ ನಾಯಕರು ಎರ್ಪಡಿಸಿದ್ದ ಔತಣ ಕೂಟಕ್ಕೆ ಶಾಸಕ ಪುಟ್ಟರಾಜು ಅವರಿಗೂ ಆಹ್ವಾನವಿತ್ತಂತೆ ಹೇಳಲಾಗಿದೆ.
ಅಲ್ಲದೇ ಕಳೆದ ಎರಡು ದಿನಗಳ ಹಿಂದೆ ಸ್ವತಃ ಸಿದ್ದರಾಮಯ್ಯನವರು ಜೆಡಿಎಸ್ ಹಾಗೂ ಬಿಜೆಪಿಯ ಕೆಲವು ಶಾಸಕರುಗಳು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ. ಆದರೆ ಈಗಲೇ ಯಾರ ಹೆಸರನ್ನೂ ಹೇಳುವುದಿಲ್ಲ. ಜೊತೆಗೆ ಇಂದು, ನಾಳೆಯೇ ಅವರೆಲ್ಲರೂ ಕಾಂಗ್ರೆಸ್ ಬರ್ತಾರೆ ಎಂದು ನಾನು ಹೇಳಿಲ್ಲ. ಮುಂದಿನ ದಿನಗಳಲ್ಲಿ ಎಲ್ಲಾ ಗೊತ್ತಾಗುತ್ತದೆ ಎಂದು ಒಗಟಾಗಿ ಹೇಳಿದ್ದರು.
ಆದರೆ ಈ ಎಲ್ಲಾ ಸಂಗತಿ ಅಲ್ಲ ಗಳೆಯುವ ಶಾಸಕ ಪುಟ್ಟರಾಜು ಮಾತ್ರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪ್ರತಿಕ್ರಿಯೆ ಕೇಳಿದಾಗಲೆಲ್ಲಾ ನಾನು ಜೆಡಿಎಸ್ ಬಿಟ್ಟು ಎಲ್ಲೂ ಹೋಗಲ್ಲ ಎಂದು ಹೇಳುತ್ತಾರೆ.
ಆದರೆ ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯ ರಾಜಕಾರಣದ ದಿಕ್ಕು ಬದಲಾಗುವುದಂತೂ ನಿಜ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment