ಚಂದನವನದಲ್ಲಿ ಬಿರುಗಾಳಿ ಎಬ್ಬಿಸಿರುವ ಮಾದಕವಸ್ತು ಪ್ರಕರಣದಲ್ಲಿ ನಟ ದಿಗಂತ್ ಅವರಿಗೆ ಎರಡನೇ ಬಾರಿ ಸಿಸಿಬಿ ಬುಧವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು.
ಇದಕ್ಕೂ ಮೊದಲು ದಿಗಂತ್ ಹಾಗೂ ಅವರ ಪತ್ನಿ, ನಟಿ ಐಂದ್ರಿತಾ ರೇ ಅವರನ್ನು ಸಿಸಿಬಿ ಪೋಲೀಸರು ವಿಚಾರಣೆ ಮಾಡಿದ್ದರು. ನಂತರ ಅವರ ಮೊಬೈಲ್ ಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ಸಿಸಿಬಿಯವರು ಅವರನ್ನು ಬಿಟ್ಟು ಕಳಿಸಿದ್ದರು.
ನಂತರ ದಿಗಂತ್ ಹಾಗೂ ಐಂದ್ರಿತಾ ರೇ ಅವರ ಮೊಬೈಲ್ ಗಳನ್ನು ಪರಿಶೀಲಿಸಿದ ವೇಳೆ ಅಧಿಕಾರಿಗಳಿಗೆ, ಸಿಮ್ ಕಾರ್ಡ್ ಇಲ್ಲದೇ ದಿಗಂತ್ ಅವರು ಮೊಬೈಲ್ ಉಪಯೋಗಿಸುತ್ತಿದ್ದುದು ಬೆಳಕಿಗೆ ಬಂದಿದೆ. ಆ ಮೊಬೈಲ್ ನ್ನು ಕೂಲಂಕುಷವಾಗಿ ಪರೀಕ್ಷಿಸಿದಾಗ ಅದರಲ್ಲಿ ವಾಟ್ಸಾಪ್ ಬಳಸುತ್ತಿದ್ದುದು ಗಮನಕ್ಕೆ ಬಂದಿದೆ. ವಾಟ್ಸಾಪ್ ನ ಎಲ್ಲ ಮಾಹಿತಿಯನ್ನು ಮರು ಪಡೆದ ಸಿಸಿಬಿಯವರಿಗೆ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅತ್ಯಂತ ಮಹತ್ವದ ಮಾಹಿತಿಗಳು ದೊರಕಿವೆ ಎನಮದು ತಿಳಿದು ಬಂದಿದೆ.
ಈ ಹಿನ್ನಲೆಯಲ್ಲಿ ಸಿಸಿಬಿ ಮತ್ತೊಮ್ಮೆ ದಿಗಂತ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿತ್ತು. ಇಂದು ಬೆಳಿಗ್ಗೆ ೧೧:೨೫ಕ್ಕೆ ದಿಗಮನತ್ ಅವರು ಸಿಸಿಬಿ ಕಛೇರಿಗೆ ಬಂದಿದ್ದಾರೆ. ದಿಗಂತ್ ಅವರ ವಿಚಾರಣೆಯನ್ನು ಸಿಸಿಬಿ ಅಧಿಕಾರಿ ಪುನೀತ್ ಮಾಡಲಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment