Main News

ಕೃಷಿ ಸೊಸೈಟಿಗಳಿಗೆ ಡಿಜಿಟಲ್‌ ಸ್ಪರ್ಶ: ಕೇಂದ್ರ ಸಚಿವ ಸಂಪುಟ ಅಸ್ತು

ದೇಶದ ಸಹಕಾರಿ ವಲಯದ ಅತೀ ಸಣ್ಣ ಘಟಕಗಳಾದ ಪ್ರಾಥಮಿಕ ಕೃಷಿ ವಿತರಣ ಸೊಸೈಟಿಗಳನ್ನು (ಪಿಎಸಿಎಸ್‌) ಗಣಕೀಕೃತ ಮಾಡುವ ಮಹತ್ವದ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆ ಒಪ್ಪಿಗೆ ನೀಡಿದೆ.

63 ಸಾವಿರ ಪಿಎಸಿಎಸ್‌ಗಳನ್ನು 2,516 ಕೋ. ರೂ. ವೆಚ್ಚದಲ್ಲಿ ಕಂಪ್ಯೂಟರೀಕರಣಗೊಳಿಸಲಾಗುತ್ತದೆ. ಕೇಂದ್ರ 1,528 ಕೋ. ರೂ. ನೀಡಲಿದೆ. ಈ ಸೊಸೈಟಿಗಳ ವ್ಯವಹಾರಗಳಲ್ಲಿ ಪಾರದರ್ಶಕತೆ ಹೆಚ್ಚಾಗಿ ಎಲ್ಲ ವ್ಯವಹಾರಗಳೂ ತ್ವರಿತವಾಗಿ ನಡೆಯಲಿದೆ. ದೇಶದ 13 ಕೋಟಿ ಸಣ್ಣ ಹಾಗೂ ಮಧ್ಯಮ ರೈತರಿಗೆ ಅನುಕೂಲವಾಗಲಿದೆ.

ದತ್ತಾಂಶ ಸಂರಕ್ಷಣೆಗೆ ಕ್ರಮ:

ಗಣಕೀಕರಣ ವೇಳೆಯಲ್ಲಿ ಎಲ್ಲ ಪಿಎಸಿಎಸ್‌ಗಳಿಗೂ ಹಾರ್ಡ್‌ವೇರ್‌ ನೆರವು ನೀಡಲಾಗುತ್ತದೆ ಹಾಗೂ ಸೊಸೈಟಿಗಳ ವತಿಯಿಂದ ಈವರೆಗೆ ನಿರ್ವಹಿಸಲಾಗಿರುವ ಎಲ್ಲ ಲಿಖಿತ ರೂಪದ ವ್ಯವಹಾರ ಗಳನ್ನು ಡಿಜಿಟಲೀಕರಣ ಗೊಳಿಸಲಾಗುತ್ತದೆ. ಇದೊಂದು ಕ್ಲೌಡ್‌ ಆಧಾರಿತ ಸಾಫ್ಟ್‌ವೇರ್.

ಸ್ಥಳೀಯ ಭಾಷೆಯಲ್ಲೇ ವ್ಯವಹಾರ:

ಗಣಕೀಕೃತ ಕಾರ್ಯ ಪೂರ್ಣಗೊಂಡ ಬಳಿಕ ಎಲ್ಲ ರಾಜ್ಯಗಳಲ್ಲಿರುವ ಪಿಎಸಿಎಸ್‌ಗಳೂ ಸ್ಥಳೀಯ ಭಾಷೆಯಲ್ಲಿಯೇ ವ್ಯವಹಾರ ನಡೆಸಲು ಅನುಕೂಲವಾಗುವಂಥ ಸಾಫ್ಟ್‌ವೇರ್ ಅಳವಡಿಸಲಾಗುತ್ತದೆ. ಈ ಸಾಫ್ಟ್‌ವೇರ್ ನಡಿಯಲ್ಲಿ ನಿರ್ವಹಿಸಲಾಗುವ ವ್ಯವಹಾರಗಳು ಸೋರಿಕೆಯಾಗದಂತೆ ತಡೆಯಲು ಕ್ಲೌಡ್ ತಂತ್ರಜ್ಞಾನ ಆಧಾರಿತ ಸಂಗ್ರಹಣ ವ್ಯವಸ್ಥೆ ಹಾಗೂ ಸೈಬರ್‌ ಭದ್ರತೆ ಹಾಗೂ ದತ್ತಾಂಶ ಸಂರಕ್ಷಣ ವಿಧಾನಗಳನ್ನು ಅಳವಡಿಸಲಾಗುತ್ತದೆ ಎಂದು ಪ್ರಸ್ತಾವನೆಯಲ್ಲಿ ಸೂಚಿಸಲಾಗಿದೆ.

ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧನೆ– ಆರಿಫ್ ಖಾನ್ ಕಿಡಿ

ನೋಡಲ್‌ ಕೇಂದ್ರವಾಗಿ ಪರಿವರ್ತನೆ:

ಪ್ರತಿಯೊಂದು ಪಿಎಸಿಎಸ್‌ ಕೇಂದ್ರವನ್ನು ನೋಡಲ್‌ ಕೇಂದ್ರವನ್ನಾಗಿ ಪರಿವರ್ತಿಸಿ, ಅವುಗಳ ಮೂಲಕ ಖಾತೆಗಳಿಗೆ ನೇರ ಹಣ ವರ್ಗಾವಣೆ (ಡಿಬಿಟಿ), ಬಡ್ಡಿ ಸಹಾಯ ಧನ ಯೋಜನೆ (ಐಎಸ್‌ಎಸ್‌), ಬೆಳೆ ವಿಮಾ ಯೋಜನೆ (ಪಿಎಂಎಫ್ಬಿವೈ) ಹಾಗೂ ರಸಗೊಬ್ಬರ, ಬೀಜ ವಿತರಣೆ ವ್ಯವಹಾರಗಳ ಕೇಂದ್ರವನ್ನಾಗಿಯೂ ಪರಿವರ್ತಿಸಲು ನಿರ್ಧರಿಸಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024