March 15, 2026

Newsnap Kannada

The World at your finger tips!

dinesh

ಬ್ಲಾಕ್ ಮೇಲ್ ಮಾಡುತ್ತಿರುವ ದಿನೇಶ್ ಬಂಧಿಸಲು ಐಜಿ ಗೆ ದೂರು

Spread the love

ಮಾಜಿ ಸಚಿವ ರಮೇಶ್ ಜಾರಕಿಹೋಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ದ ತನಿಖೆ ನಡೆಸುವಂತೆ ದೂರು ನೀಡಲಾಗಿದೆ.

ಮಂಡ್ಯದ ಭಾರತ ಸಂವಿಧಾನ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪೂರ್ಣಚಂದ್ರ ಎಂಬುವರು ದೂರು ನೀಡಿದ್ದಾರೆ.

ರಾಜ್ಯದ ಪ್ರಮುಖ ರಾಜಕಾರಣಿಗಳು ಮತ್ತು ಅಧಿಕಾರಿಗಳ ಅನೇಕ ಸಿಡಿಗಳನ್ನು ಇಟ್ಟು ಕೊಂಡು ದಿನೇಶ್ ಕಲ್ಲಹಳ್ಳಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂದು ದೂರಿನಲ್ಲಿ ನೇರ ಆರೋಪ ಮಾಡಿದ್ದಾರೆ.

ಸಚಿವನ ರಾಸಲೀಲೆ ಸಿ.ಡಿ ಬಿಡುಗಡೆ ಮಾಡಿ ಸಮಾಜದ ಸ್ವಾಸ್ಥ ಹಾಳು ಮಾಡ್ ಮಾಡುತ್ತಿದ್ದಾರೆ. ತಕ್ಷಣವೇ ಸೂಕ್ತ ಈ ಬಗ್ಗೆ ದೂರು ನೀಡಿರೋ ದಿನೇಶ್ ಕಲ್ಲಹಳ್ಳಿ ರನ್ನು ಬಂಧಿಸಿ ತನಿಖೆ ನಡೆಸುವಂತೆ ಒತ್ತಾಯ ಮಾಡಿದ್ದಾರೆ.‌

ತನಿಖೆ ನಡೆಸಿ ಈತನ ಬಳಿ ಸಿಡಿಗಳು ಎಷ್ಟಿವೆ ಇದರ ಹಿಂದೆ ಇರುವ ಪ್ರಭಾವಿಗಳು ಯಾರು ಅನ್ನೋದನ್ನು ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

ತನಿಖೆಗೆ ಒತ್ತಾಯಿಸಿ ಬೆಂಗಳೂರಿನ ಐಜಿ ಹಾಗೂ ಮಾನವಹಕ್ಕು ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

error: Content is protected !!