ಮಾಜಿ ಮುಖ್ಯಮಂತ್ರಿ ದಿ. ಗುಂಡೂರಾವ್ ಪತ್ನಿ ಹಾಗೂ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮಿ ಗುಂಡೂರಾವ್ ಕಳೆದ ರಾತ್ರಿ ವಿಧಿವಶರಾದರು.
ಕೋವಿಡ್ ಸಂಬಂಧಿ ಸಮಸ್ಯೆಗಳಿಂದ ವರಲಕ್ಷ್ಮಿ ಬಳಲುತ್ತಿದ್ದರು ಎನ್ನಲಾಗಿದೆ. ಮೃತರ ಅಂತ್ಯಕ್ರಿಯೆ ಇಂದು ( ಜ. 6) ದೇವನಹಳ್ಳಿ ತೋಟದಲ್ಲಿ ನಡೆಯಲಿದೆ.
ಈ ಹಿಂದೆ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.
ದಿನೇಶ್ ಗುಂಡೂರಾವ್ ಅವರ ತಾಯಿ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಸಚಿವ ಸುರೇಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ.