ಮಲಯಾಳಂನ ‘ಸೂಫಿಯುಂ ಸುಜಾತಯುಂ’ ಚಿತ್ರದ ನಿರ್ದೇಶಕ ನಾರಾನಿಪುಳ ಶಾನವಾಸ್(37) ಹೃದಯಾಘಾತದಿಂದ ನಿಧನರಾದರು.
‘ಗಾಂಧಿರಾಜನ್’ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದ ವೇಳೆ ಶೂಟಿಂಗ್ ಸೆಟ್ ನಲ್ಲೇ ಶಾನವಾಸ್ಗೆ ಹೃದಯಾಘಾತವಾಗಿತ್ತು.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಶಾನವಾಸ್ ಅವರಿಗೆ ಮಾರ್ಗಮಧ್ಯೆ ಎರಡನೇ ಬಾರಿ ಹೃದಯಾಘಾತ ವಾಯಿತು.
ಆಗ ಅವರ ಸ್ಥಿತಿ ಮತ್ತಷ್ಟು ಚಿಂತಾಜನಕವಾಯಿತು. ಬುಧವಾರ ರಾತ್ರಿ 10.20ರ ಸುಮಾರಿಗೆ ಕೊನೆಯುಸಿರೆಳೆದರು.
ಮಳಪುರಂ ಮೂಲದವರಾಗಿರುವ ಶಾನವಾಸನ್ ಅವರು 2015ರಲ್ಲಿ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದರು. ‘ಮಲಯಳಂ ನ ಸೂಫಿಯುಂ ಸುಜಾತಯುಂ’ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು.
ಈ ಸಿನಿಮಾದಿಂದ ಶಾನವಾಸ್ ಅವರಿಗೆ ಸಾಕಷ್ಟು ಜನಮನ್ನಣೆ ಸಿಕ್ಕಿತ್ತು. ಚಿತ್ರದಲ್ಲಿ ಬಾಲಿವುಡ್ ನಟಿ ಅದಿತಿ ರಾವ್ ಹೈದರಿ, ಜಯಸೂರ್ಯ, ದೇವ್ ಮೋಹನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ