ಆರು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಣಿರತ್ನಂ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋವಿಡ್ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಣಿರತ್ನಂ ಅವರ ಆರೋಗ್ಯದ ಸ್ಥಿತಿ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಬೇಕಿದೆ.
ಕನ್ನಡದ ‘ಪಲ್ಲವಿ ಅನುಪಲ್ಲವಿ’ ಸಿನಿಮಾ ಮೂಲಕ ಮಣಿರತ್ನಂ ಅವರು 1983ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. 1986ರಲ್ಲಿ ಮಣಿರತ್ನಂ ಅವರು ನಿರ್ದೇಶಿಸಿದ್ದ ತಮಿಳಿನ ‘ಮೌನ ರಾಗಂ’ ಚಿತ್ರ ಭಾರೀ ಯಶಸ್ಸು ಕಂಡಿತ್ತು. 1988ರಲ್ಲಿ ಮಣಿರತ್ನಂ ಅವರು ನಟಿ ಸುಹಾಸಿನಿ ಅವರನ್ನು ವಿವಾಹವಾದರು. ಈ ಜೋಡಿಗೆ ನಂದನ್ ಎಂಬ ಪುತ್ರನಿದ್ದಾನೆ.