ಚಿಕ್ಕಮಗಳೂರು:
ಮಾಜಿ ಸಚಿವ ಡಿ ಬಿ ಚಂದ್ರೇಗೌಡ (87 ) ಅವರು ತೀವ್ರ ಅನಾರೋಗ್ಯದಿಂದ ಕಳೆದ ರಾತ್ರಿ ದಾರದಹಳ್ಳಿ ನಿವಾಸದಲ್ಲಿ ಕೊನೆಯುಸಿರೆಳೆದರು.
ಮೂಡಿಗೆರೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ (ಬುಧವಾರ) ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ರಾಜಕೀಯದಲ್ಲಿ ಹೆಜ್ಜೆ ಗುರುತು :
ಬಿ ಎ ಎಲ್ ಎಲ್ ಬಿ ವ್ಯಾಸಂಗ ಮಾಡಿದ್ದ ಡಿ ಬಿ ಚಂದ್ರೇಗೌಡ, 1971 ಹಾಗೂ 1977 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಲೋಕಸಭಾ ಸದಸ್ಯರಾಗಿ ಅಯ್ಕೆಯಾಗಿದ್ದರು. ಇದಕ್ಕೂ ಮೊದಲು ಇಂದಿರಾ ಗಾಂಧಿ ಅವರು ಚಿಕ್ಕಮಗಳೂರಿನಿಂದ ಸ್ಪರ್ಧಿಸಲು ಮುಂದಾಗಿದ್ದರು. ಆ ವೇಳೆ ಕಾಂಗ್ರೆಸ್ ಪಕ್ಷದಲ್ಲಿದ್ದ ದಿ ಬಿ ಚಂದ್ರೇಗೌಡ ತಮ್ಮ ಕ್ಷೇತ್ರಕ್ಕೆ ರಾಜೀನಾಮೆ ನೀಡುವ ಮೂಲಕ ಇಂದಿರಾ ಗಾಂಧಿ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದರು.
ಆ ಚುನಾವಣೆಯಲ್ಲಿ ಇಂದಿರಾಗಾಂಧಿ ಗೆಲುವು ಸಾಧಿಸಿದ್ದರು. ಇದಲ್ಲದೆ, ಜೀವನದ ಹೆಚ್ಚಿನ ಸಮಯವನ್ನು ರಾಜಕೀಯದಲ್ಲಿ ಕಳೆದಿದ್ದ ಚಂದ್ರೇಗೌಡರು ತೀರ್ಥಹಳ್ಳಿ ಹಾಗೂ ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು