ಜೀವನದಲ್ಲಿ ಜಿಗುಪ್ಸೆ : ಸಕಲೇಶಪುರ ಪುರಸಭೆ ಕಂದಾಯ ಅಧಿಕಾರಿ ಆತ್ಮಹತ್ಯೆ

Team Newsnap
0 Min Read

ಸಕಲೇಶಪುರ ಪುರಸಭೆ ಕಂದಾಯ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ನಗರದ ಹೊರವಲಯದಲ್ಲಿ ಜರುಗಿದೆ.

ಸಿ.ಟಿ.ಗೋಪಾಲಕೃಷ್ಣ(41) ನೇಣಿಗೆ ಶರಣಾದ ಅಧಿಕಾರಿ.

ಗೋಪಾಲಕೃಷ್ಣ ಕಳೆದ ಎರಡು ವರ್ಷಗಳಿಂದ ಸಕಲೇಶಪುರ ಪುರಸಭೆ ಕಂದಾಯ ಅಧಿಕಾರಿಯಾಗಿದ್ದರು. ನನಗೆ ಬದುಕಲು ಇಷ್ಟವಿಲ್ಲ, ಆದ್ದರಿಂದ ಸಾಯುತ್ತಿದ್ದೇನೆ ಎಂದು ಡೆತ್‍ನೋಟ್ ಬರೆದಿಟ್ಟು ಗೋಪಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೋಪಾಲಕೃಷ್ಣ ಅವರು ಹಾಸನ ನಗರದ ಹೊರವಲಯದ ಚಿಕ್ಕಕೊಂಡಗೊಳ ನಿವಾಸಿ. , ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share This Article
Leave a comment