ರಾಜಧಾನಿಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ ದುರಂತ ತಲ್ಲಣವಾಗುವಂತೆ ಮಾಡಿದೆ.
ಗಂಡ ಸಾವಿನ ಜಿಗುಪ್ಸೆಯಲ್ಲಿ ಇಬ್ಬರು ಮಕ್ಕಳ ಸಮೇತ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯ ಪ್ರಕೃತಿ ಲೇಔಟ್ನಲ್ಲಿ ಜರುಗಿದೆ.
ಮೃತರನ್ನು ವಸಂತಾ(40), ಯಶವಂತ್ (15) ಹಾಗೂ ನಿಶ್ಚಿತಾ (6) ಎಂದು ಗುರುತಿಸಲಾಗಿದೆ.
ಕಳೆದ ಐದು ತಿಂಗಳ ಹಿಂದೆ ಮಾರಕ ಕೊರೋನಾದಿಂದ ಮನೆಯ ಯಜಮಾನ, ಪತಿ ಪ್ರಸನ್ನ ಕುಮಾರ್ ಬಲಿಯಾಗಿದ್ದರು.
ಕೆಎಸ್ ಆರ್ ಟಿಸಿ ಯಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಪ್ರಸನ್ನ ಕುಮಾರ್ ಸಾವಿನಿಂದ ಜೀವನ ನಡೆಸಲಾಗದೇ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಮನೆ ಸಾಲ ಕಟ್ಟಲು ಸಾಧ್ಯವಾಗದೇ ಸ್ವಾಭಿಮಾನ ಕ್ಕೆ ಅಂಜಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ.
ನಿತ್ಯ ಜೀವನ ನಡಸುವುದು ಕಷ್ಟವಾಗಿದೆ ಎನ್ನುವ ನಕಾರಣಕ್ಕೆ ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಈ ಕುಟುಂಬ ಪ್ರಯತ್ನ ಮಾಡಿತ್ತು.
ಮನೆಯಲ್ಲೇ ತಾಯಿ ಹಾಗೂ ಇಬ್ಬರು ಮಕ್ಕಳು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ