Mandya

ಮೈಶುಗರ್ ಸಕ್ಕರೆ ಕಾರ್ಖಾನೆಯ 4 ನೇ ವೇಜ್ ಬೋಡ್೯ ಅರಿಯರ್ಸ್ ವಿತರಣೆ

ಮೈಶುಗರ್ ಸಕ್ಕರೆ ಕಾರ್ಖಾನೆಯ 4 ನೇ ವೇಜ್ ಬೋಡ್೯ ಅರಿಯರ್ಸ್ ಚೆಕ್ ನ್ನು‌ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಇಂದು ಸಕ್ಕರೆ ಕಾರ್ಖಾನೆ ಆವರಣದಲ್ಲಿ ವಿತರಿಸಿದರು.

ಕಾರ್ಮಿಕರ ಹಿತದೃಷ್ಟಿಯಿಂದ ನಾವು ಕೇಂದ್ರ ಸರ್ಕಾರದ ಜೊತೆ ಪತ್ರ ವ್ಯವಹಾರ ನಡೆಸಿ ಎರಡು ಮೂರು ವರ್ಷದಿಂದ ಗೋದಾಮುನಲ್ಲಿ ಇರೋ ಸಕ್ಕರೆ ಎನ್ನೆಲ್ಲಾ ಒಟ್ಟಿಗೆ ನಾವು ಮಾರಾಟ ಮಾಡಿ ಬಂದಂತಹ 8 ಕೋಟಿ ಹಣವನ್ನ ನಿವೃತ್ತಿ ನೌಕರರ ಪಿಂಚಣಿ, ಮೆಡಿಕಲ್ ಹಣಕ್ಕೆ ನಾವೂ ವಿನಿಯೋಗ ಮಾಡಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಮಾತನಾಡಿ ಕಾರ್ಮಿಕರು ಕಾರ್ಖಾನೆಯ ಜೀವಾಳ, ಮೈಶುಗರ್ ಕಾರ್ಖಾನೆ ಮಂಡ್ಯ ಜಿಲ್ಲೆಯ ಹೆಮ್ಮೆ ಕಾರ್ಮಿಕರು ಹಾಗೂ ರೈತಾಪಿ ವರ್ಗದವರು ಮೈಶುಗರ್ ಕಾರ್ಖಾನೆಯ ಕಾರ್ಯನಿರ್ವಾಹಣೆಗಾಗಿ ಶ್ರಮಿಸಬೇಕು.

4 ನೇ ವೇತನ ಮಂಡಳಿಯ ಸುಮಾರು 1127 ನೌಕರರಿಗೆ ಬಾಕಿ ವೇತನ ಪಾವತಿ ಮಾಡಲು ಕ್ರಮ ವಹಿಸಲಾಗಿದೆ. 6.14 ಕೋಟಿ ಹಣದಲ್ಲಿ 2.94 ಕೋಟಿ ಹಣ ವಿತರಣೆ ಮಾಡಲು ಅನುಮತಿ ದೊರೆತಿದೆ. ಇಂದು ಸಾಂಕೇತಿಕವಾಗಿ 15 ಜನಕ್ಕೆ ಚೆಕ್ ವಿತರಣೆ ಮಾಡಿದ್ದೇವೆ. ಉಳಿದಂತೆ ಎಲ್ಲಾ ಕಾರ್ಮಿಕರಿಗೆ 4 ನೇ ವೇತನದ ಬಾಕಿಯು ಆರ್.ಟಿ.ಜಿ.ಎಸ್ ಮೂಲಕ ಅವರ ಬ್ಯಾಂಕ್ ಖಾತೆ ಜಮೆ ಮಾಡಲಾಗುವುದು.

ಮಂಡ್ಯ ರೈತರು ಕಬ್ಬು ಕಡಿಯುವ ಸಂಸ್ಕೃತಿಯನ್ನು ಬೆಳಿಸಿಕೊಳ್ಳಬೇಕು. ಇದರಿಂದ ಬೇರೆ ಜಿಲ್ಲೆಯ ಕಾರ್ಮಿಕರ ಮೇಲೆ ಅವಲಂಬಿತರಾಗುವುದು ತಪ್ಪುತ್ತದೆ. ಇದರಿಂದ ಹಣದ ಉಳಿತಾಯ ಸಹ ಆಗುತ್ತದೆ ಎಂದರು.

ಮೈಶುಗರ್ ಕಾರ್ಖಾನೆಯ ವ್ಯವಸ್ಥಾಪಕರ ನಿರ್ದೇಶಕ ಅಪ್ಪಸಾಹೇಬ್ ಪಾಟೀಲ್ ಮಾತನಾಡಿ 4ನೇ ವೇತನ ಮಂಡಳಿಯ ಹಣ ಜಾರಿಯಾಗುವುದಕ್ಕೆ ಕಾರ್ಮಿಕರ ಸಂಘಟನೆಯ ಹೋರಾಟ ಕಾರಣ, ಅದಕ್ಕಾಗಿ ಅವರಿಗೆ ನನ್ನ ಧನ್ಯವಾದಗಳು ಎಂದರು.

ರೈತರಿಗೆ ಹಾಗೂ ಕಬ್ಬು ಕಟಾವು ಮಾಡಿದವರಿಗೆ ಯಾವುದೇ ರೀತಿಯ ಹಣ ಕಾರ್ಖಾನೆಯಿಂದ ಬಾಕಿ ಉಳಿಸಿಕೊಂಡಿಲ್ಲ.

ಮಂಡ್ಯ ಜಿಲ್ಲೆ ಸಕ್ಕರೆ ನಾಡು ಎಂಬ ಹೆಸರನ್ನು ಅಳಿಸಲು ಯಾವ ಜಿಲ್ಲೆಗೂ ಆಗಿಲ್ಲ. ಅದಕ್ಕೆ ಈ ಭಾಗದ ರೈತಾಪಿ ವರ್ಗ ಕಾರಣ ಎಂದರು.

ಕಾರ್ಯಕ್ರಮದಲ್ಲಿ ಮೈಶುಗರ್ ಕಾರ್ಖಾನೆಯ ವೆಂಕಟೇಶ್, ಕಾರ್ಖಾನೆಯ ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಹಾಜರಿದ್ದರು.

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024