ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಜೋಳ ವಿತರಣೆ ಮಾಡುತ್ತಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಮೆಟ್ರಿಕ್ ಟನ್ ರಾಗಿ, 1 ಲಕ್ಷ ಮೆಟ್ರಿಕ್ ಟನ್ ಜೋಳ, 2.60 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿ ಮಾಡಿತ್ತು, ಕೇಂದ್ರದ ಸೂಚನೆಯಂತೆ ಕಳೆದ ಮೂರು ತಿಂಗಳಿನಿಂದ ವಿತರಣೆ ಮಾಡಲಾಗುತ್ತಿತ್ತು.ಇದನ್ನು ಓದಿ –1.88 ಕೋಟಿ ರು ವಂಚನೆ ಪ್ರಕರಣ :ನಟ ವೀರೇಂದ್ರ ಬಾಬು ಬಂಧನ
ಈಗ ಸಂಗ್ರಹಣೆ ಮಾಡಿದ್ದ ರಾಗಿ, ಜೋಳ ಖಾಲಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರಿಗೆ ರಾಗಿ, ಜೋಳ ವಿತರಣೆ ಸ್ಥಗಿತಗೊಳಿಸಲಾಗುತ್ತಿದೆ.
ಉತ್ತರ ಕರ್ನಾಟಕದಲ್ಲಿ ಬಿಪಿಎಲ್ ಪಡಿತರದಾರರಿಗೆ ಅಕ್ಕಿಯ ಜೊತೆಗೆ ಜೋಳ ಆಗಸ್ಟ್ ನಂತರ ಸ್ಥಗಿತಗೊಂಡರೆ, ದಕ್ಷಿಣ ಕರ್ನಾಟಕ ಭಾಗದಲ್ಲಿ ಸೆಪ್ಟೆಂಬರ್ ನಂತರ ರಾಗಿ ಸ್ಥಗಿತಗೊಳ್ಳಲಿದೆ.
ಈ ಹಿಂದೆ ನೀಡುತ್ತಿದ್ದಂತೆ 10 ಅಕ್ಕಿ ವಿತರಣೆ ಮುಂದುವರೆಯಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು